ಬ್ರೇಕಿಂಗ್ ನ್ಯೂಸ್
17-04-21 10:49 am Mangalore Correspondent ಕ್ರೈಂ
ಪಡುಬಿದ್ರೆ, ಎ.17 : ಇಪ್ಪತ್ತು ವರ್ಷಗಳ ಹಿಂದೆ ನಡೆದಿದ್ದ ಮಜೂರು ಕರಂದಾಡಿ ಗುತ್ತು ಜಯರಾಮ ಶೆಟ್ಟಿ ಎಂಬವರ ಕೊಲೆ ಪ್ರಕರಣದಲ್ಲಿ ಆಪಾದಿತನಾಗಿ ತಲೆಮರೆಸಿಕೊಂಡಿದ್ದ ಆರೋಪಿ ಬಡಾ ಎರ್ಮಾಳ್ ನಿವಾಸಿ ಇಲಿಯಾಸ್ ಯಾನೆ ಮಹಮ್ಮದ್ ಹಸನ್ (45) ಎಂಬಾತನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಜಯರಾಮ ಶೆಟ್ಟಿ ಅವರನ್ನು 2000ನೇ ಇಸವಿಯಲ್ಲಿ ಅವರ ಸಹೋದರ ಉದಯ ಶೆಟ್ಟಿ ಯಾನೆ ದಾಡೆ ಉದಯ ಎಂಬಾತ ಆಸ್ತಿ ತಕರಾರಿನ ಹಿನ್ನೆಲೆಯಲ್ಲಿ ಸುನಿಲ್ ಶೆಟ್ಟಿ, ಇಲಿಯಾಸ್ ಯಾನೆ ಮಹಮ್ಮದ್ ಹಸನ್ ಮತ್ತು ಅಬೂಬಕ್ಕರ್ ಸಿದ್ದಿಕ್ ಎಂಬವರ ಜೊತೆ ಸೇರಿಕೊಂಡು ಕೊಲೆ ಮಾಡಿದ್ದ.
ಆರೋಪಿಗಳ ಬಂಧನವಾಗಿ ಪ್ರಕರಣದ ವಿಚಾರಣೆ ಕೋರ್ಟಿನಲ್ಲಿ ಪ್ರಗತಿಯಲ್ಲಿದ್ದಾಗ, 2007ರಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಬಳಿಕ ಮಹಮ್ಮದ್ ರಫೀಕ್ ಎಂಬ ಹೆಸರಲ್ಲಿ ನಕಲಿ ಪಾಸ್ಪೋರ್ಟ್ ಮಾಡಿಸಿಕೊಂಡು ಸೌದಿ ಅರೇಬಿಯಾಕ್ಕೆ ಪರಾರಿ ಆಗಿದ್ದ. ಇತ್ತೀಚೆಗೆ ಈತ ಊರಿಗೆ ಬಂದಿರುವ ಮಾಹಿತಿ ಪಡೆದ ಕಾಪು ಠಾಣೆ ವಾರಂಟ್ ಸಿಬ್ಬಂದಿ ಹೆಡ್ ಕಾನ್ ಸ್ಟೇಬಲ್ಗಳಾದ ಸುಧಾಕರ ಭಂಡಾರಿ, ರಫೀಕ್, ರವೀಂದ್ರ, ಪಿ.ಸಿ. ಸಂದೇಶ್ ಭಂಡಾರಿ ಆರೋಪಿಯನ್ನು ಬಂಧಿಸಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
Police of Kaup station arrested a warrant accused who was absconding since 2008. Ilyas alias Mohammed Hassan alias Mohammed Rafiq is the accused who was arrested by the warrant personnel of Kaup police station.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am