ಬ್ರೇಕಿಂಗ್ ನ್ಯೂಸ್
17-04-21 06:13 pm Headline Karnataka News Network ಕ್ರೈಂ
ಮಂಗಳೂರು, ಎ.17: ಮೂಡುಬಿದ್ರೆ ಪೊಲೀಸರು ಬಂಧಿಸಿರುವ ದರೋಡೆ ಪ್ರಕರಣದ ಆರೋಪಿಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಆರೋಪದಲ್ಲಿ ಪುತ್ತೂರಿನ ಮಾಜಿ ಗ್ರಾಮ ಪಂಚಾಯತ್ ಸದಸ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.


ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮ ಪಂಚಾಯತಿನಲ್ಲಿ ಮಾಜಿ ಸದಸ್ಯನಾಗಿರುವ ಕೆದಂಬಾಡಿ ನಿವಾಸಿ ಅಬ್ದುಲ್ ಬಶೀರ್(40) ಬಂಧಿತ ಆರೋಪಿ. ಮೂಡುಬಿದ್ರೆ, ಬೆಳ್ತಂಗಡಿ, ಉಪ್ಪಿನಂಗಡಿ, ಚಿಕ್ಕಮಗಳೂರು, ಉಡುಪಿ, ಕೊಡಗು ಸೇರಿದಂತೆ ಐದಾರು ಜಿಲ್ಲೆಗಳಲ್ಲಿ ದರೋಡೆ ನಡೆಸುತ್ತಿದ್ದ ನಾಲ್ಕು ಗ್ಯಾಂಗ್ ಗಳನ್ನು ಮೂಡುಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ನೇತೃತ್ವದ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. 15 ಮಂದಿಯನ್ನು ಬಂಧಿಸಿದ್ದಲ್ಲದೆ, ಆರೋಪಿಗಳು ನೀಡಿದ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಸೇರಿ 28 ಪ್ರಕರಣಗಳನ್ನು ಪತ್ತೆ ಮಾಡಲಾಗಿತ್ತು.
ಪೊಲೀಸರ ತನಿಖೆ ಮುಂದುವರಿದಿದ್ದು, ದರೋಡೆ ತಂಡಕ್ಕೆ ವಿವಿಧೆಡೆ ಶೆಲ್ಟರ್ ಮತ್ತು ಹಣಕಾಸು ನೆರವು ನೀಡುತ್ತಿದ್ದ ಅಬ್ದುಲ್ ಬಶೀರ್ ನನ್ನು ಬಂಧಿಸಲಾಗಿದೆ. ಪುತ್ತೂರು ತಾಲೂಕಿನಲ್ಲಿ ಸಮಾಜ ಸೇವಕನ ರೀತಿ ಪೋಸು ನೀಡುತ್ತಿದ್ದ ಅಬ್ದುಲ್ ಬಶೀರ್, ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ. ದರೋಡೆ ತಂಡಕ್ಕೆ ವಾಹನ, ದರೋಡೆಯ ಬಳಿಕ ಅಡಗಿಕೊಳ್ಳಲು ಬೇರೆ ಬೇರೆ ಕಡೆ ವ್ಯವಸ್ಥೆ ಮಾಡುತ್ತಿದ್ದ ವಿಚಾರ ತನಿಖೆಯಲ್ಲಿ ಬಯಲಾಗಿದೆ. ಅಲ್ಲದೆ, ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ದರೋಡೆ ಪ್ರಕರಣದಲ್ಲಿ ಅಬ್ದುಲ್ ಬಶೀರ್ ಸಂಚು ನಡೆಸಿದ್ದ ಆರೋಪ ಎದುರಿಸುತ್ತಿದ್ದಾನೆ.
Puttur Former Gram Panchyath Member has been arrested for Financially assisting a gang of robbers for Dacoity. The arrested has been identified as Abdul Basheer (40).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm