ಬ್ರೇಕಿಂಗ್ ನ್ಯೂಸ್
17-04-21 06:13 pm Headline Karnataka News Network ಕ್ರೈಂ
ಮಂಗಳೂರು, ಎ.17: ಮೂಡುಬಿದ್ರೆ ಪೊಲೀಸರು ಬಂಧಿಸಿರುವ ದರೋಡೆ ಪ್ರಕರಣದ ಆರೋಪಿಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಆರೋಪದಲ್ಲಿ ಪುತ್ತೂರಿನ ಮಾಜಿ ಗ್ರಾಮ ಪಂಚಾಯತ್ ಸದಸ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮ ಪಂಚಾಯತಿನಲ್ಲಿ ಮಾಜಿ ಸದಸ್ಯನಾಗಿರುವ ಕೆದಂಬಾಡಿ ನಿವಾಸಿ ಅಬ್ದುಲ್ ಬಶೀರ್(40) ಬಂಧಿತ ಆರೋಪಿ. ಮೂಡುಬಿದ್ರೆ, ಬೆಳ್ತಂಗಡಿ, ಉಪ್ಪಿನಂಗಡಿ, ಚಿಕ್ಕಮಗಳೂರು, ಉಡುಪಿ, ಕೊಡಗು ಸೇರಿದಂತೆ ಐದಾರು ಜಿಲ್ಲೆಗಳಲ್ಲಿ ದರೋಡೆ ನಡೆಸುತ್ತಿದ್ದ ನಾಲ್ಕು ಗ್ಯಾಂಗ್ ಗಳನ್ನು ಮೂಡುಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ನೇತೃತ್ವದ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. 15 ಮಂದಿಯನ್ನು ಬಂಧಿಸಿದ್ದಲ್ಲದೆ, ಆರೋಪಿಗಳು ನೀಡಿದ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಸೇರಿ 28 ಪ್ರಕರಣಗಳನ್ನು ಪತ್ತೆ ಮಾಡಲಾಗಿತ್ತು.
ಪೊಲೀಸರ ತನಿಖೆ ಮುಂದುವರಿದಿದ್ದು, ದರೋಡೆ ತಂಡಕ್ಕೆ ವಿವಿಧೆಡೆ ಶೆಲ್ಟರ್ ಮತ್ತು ಹಣಕಾಸು ನೆರವು ನೀಡುತ್ತಿದ್ದ ಅಬ್ದುಲ್ ಬಶೀರ್ ನನ್ನು ಬಂಧಿಸಲಾಗಿದೆ. ಪುತ್ತೂರು ತಾಲೂಕಿನಲ್ಲಿ ಸಮಾಜ ಸೇವಕನ ರೀತಿ ಪೋಸು ನೀಡುತ್ತಿದ್ದ ಅಬ್ದುಲ್ ಬಶೀರ್, ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ. ದರೋಡೆ ತಂಡಕ್ಕೆ ವಾಹನ, ದರೋಡೆಯ ಬಳಿಕ ಅಡಗಿಕೊಳ್ಳಲು ಬೇರೆ ಬೇರೆ ಕಡೆ ವ್ಯವಸ್ಥೆ ಮಾಡುತ್ತಿದ್ದ ವಿಚಾರ ತನಿಖೆಯಲ್ಲಿ ಬಯಲಾಗಿದೆ. ಅಲ್ಲದೆ, ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ದರೋಡೆ ಪ್ರಕರಣದಲ್ಲಿ ಅಬ್ದುಲ್ ಬಶೀರ್ ಸಂಚು ನಡೆಸಿದ್ದ ಆರೋಪ ಎದುರಿಸುತ್ತಿದ್ದಾನೆ.
Puttur Former Gram Panchyath Member has been arrested for Financially assisting a gang of robbers for Dacoity. The arrested has been identified as Abdul Basheer (40).
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 06:54 pm
Mangalore Correspondent
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm