ಬ್ರೇಕಿಂಗ್ ನ್ಯೂಸ್
17-04-21 06:13 pm Headline Karnataka News Network ಕ್ರೈಂ
ಮಂಗಳೂರು, ಎ.17: ಮೂಡುಬಿದ್ರೆ ಪೊಲೀಸರು ಬಂಧಿಸಿರುವ ದರೋಡೆ ಪ್ರಕರಣದ ಆರೋಪಿಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಆರೋಪದಲ್ಲಿ ಪುತ್ತೂರಿನ ಮಾಜಿ ಗ್ರಾಮ ಪಂಚಾಯತ್ ಸದಸ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.


ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮ ಪಂಚಾಯತಿನಲ್ಲಿ ಮಾಜಿ ಸದಸ್ಯನಾಗಿರುವ ಕೆದಂಬಾಡಿ ನಿವಾಸಿ ಅಬ್ದುಲ್ ಬಶೀರ್(40) ಬಂಧಿತ ಆರೋಪಿ. ಮೂಡುಬಿದ್ರೆ, ಬೆಳ್ತಂಗಡಿ, ಉಪ್ಪಿನಂಗಡಿ, ಚಿಕ್ಕಮಗಳೂರು, ಉಡುಪಿ, ಕೊಡಗು ಸೇರಿದಂತೆ ಐದಾರು ಜಿಲ್ಲೆಗಳಲ್ಲಿ ದರೋಡೆ ನಡೆಸುತ್ತಿದ್ದ ನಾಲ್ಕು ಗ್ಯಾಂಗ್ ಗಳನ್ನು ಮೂಡುಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ನೇತೃತ್ವದ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. 15 ಮಂದಿಯನ್ನು ಬಂಧಿಸಿದ್ದಲ್ಲದೆ, ಆರೋಪಿಗಳು ನೀಡಿದ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಸೇರಿ 28 ಪ್ರಕರಣಗಳನ್ನು ಪತ್ತೆ ಮಾಡಲಾಗಿತ್ತು.
ಪೊಲೀಸರ ತನಿಖೆ ಮುಂದುವರಿದಿದ್ದು, ದರೋಡೆ ತಂಡಕ್ಕೆ ವಿವಿಧೆಡೆ ಶೆಲ್ಟರ್ ಮತ್ತು ಹಣಕಾಸು ನೆರವು ನೀಡುತ್ತಿದ್ದ ಅಬ್ದುಲ್ ಬಶೀರ್ ನನ್ನು ಬಂಧಿಸಲಾಗಿದೆ. ಪುತ್ತೂರು ತಾಲೂಕಿನಲ್ಲಿ ಸಮಾಜ ಸೇವಕನ ರೀತಿ ಪೋಸು ನೀಡುತ್ತಿದ್ದ ಅಬ್ದುಲ್ ಬಶೀರ್, ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ. ದರೋಡೆ ತಂಡಕ್ಕೆ ವಾಹನ, ದರೋಡೆಯ ಬಳಿಕ ಅಡಗಿಕೊಳ್ಳಲು ಬೇರೆ ಬೇರೆ ಕಡೆ ವ್ಯವಸ್ಥೆ ಮಾಡುತ್ತಿದ್ದ ವಿಚಾರ ತನಿಖೆಯಲ್ಲಿ ಬಯಲಾಗಿದೆ. ಅಲ್ಲದೆ, ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ದರೋಡೆ ಪ್ರಕರಣದಲ್ಲಿ ಅಬ್ದುಲ್ ಬಶೀರ್ ಸಂಚು ನಡೆಸಿದ್ದ ಆರೋಪ ಎದುರಿಸುತ್ತಿದ್ದಾನೆ.
Puttur Former Gram Panchyath Member has been arrested for Financially assisting a gang of robbers for Dacoity. The arrested has been identified as Abdul Basheer (40).
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm