ಬ್ರೇಕಿಂಗ್ ನ್ಯೂಸ್
24-08-20 05:51 pm Mangalore Reporter ಕ್ರೈಂ
ಬೆಳ್ತಂಗಡಿ, ಆಗಸ್ಟ್ 24: ಸೋಮವಾರ ಮುಂಜಾನೆ, ವಾಕಿಂಗ್ ಹೋಗುತ್ತಿದ್ದ ತಂದೆಯ ಮೇಲೆ ಹೊಂಚು ಹಾಕಿ ಕುಳಿತಿದ್ದ ಪುತ್ರ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ ಬೆಚ್ಚಿ ಬೀಸುವ ಘಟನೆ ಬೆಳ್ತಂಗಡಿ ಜೂನಿಯರ್ ಕಾಲೇಜು ಮೈದಾನ ರಸ್ತೆಯಲ್ಲಿ ನಡೆದಿದ್ದು ದಾಳಿಗೊಳಗಾದ ಸ್ಥಳೀಯ ನಿವಾಸಿ ವಾಸು ಸಪಲ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಆರೋಪಿ ಪುತ್ರ ದಯಾನಂದ ನಡೆಸಿದ ಮಾರಾಕಾಸ್ತ್ರ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ ವಾಸು ಸಪಲ್ಯ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ವಾಸು, ಬೆಳ್ತಂಗಡಿಯಲ್ಲಿ ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರ ಮಗ ದಯಾನಂದ ಕೂಡ ಚಾಲಕನಾಗಿದ್ದು ಕುಡಿದು ಬಂದು ತಂದೆ ಜೊತೆ ಗಲಾಟೆ ಮಾಡುತ್ತಿದ್ದ. ತಂದೆ - ಮಗನ ಜಗಳ ಈ ಹಿಂದೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದೂ ಆಗಿತ್ತು. ವಾಸು ಸಪಲ್ಯ ಮೇಲೆ ಮಾರಣಾಂತಿಕ ದಾಳಿ ನಡೆದ ಬಳಿಕ ಮಗ ಸೋಮವಾರ ಬೆಳಗ್ಗಿನಿಂದಲೇ ನಾಪತ್ತೆಯಾಗಿದ್ದಾನೆ. ಹೀಗಾಗಿ ಸ್ಥಳೀಯರಲ್ಲಿ ಮಗನ ಮೇಲೆ ಅನುಮಾನ ವ್ಯಕ್ತವಾಗಿದೆ.
ಮೃತರು ಮೂವರು ಗಂಡು ಮಕ್ಕಳು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm