ಬ್ರೇಕಿಂಗ್ ನ್ಯೂಸ್
31-07-20 06:45 pm Headline Karnataka News Network ಕ್ರೈಂ
ಮುಂಬೈ: ಕೌಟುಂಬಿಕ ಕಲಹದಿಂದ ಸ್ನೇಹಿತನ ಸಹಾಯದಿಂದ ಪತ್ನಿಯನ್ನೇ ಕೊಂದು ಡ್ರಮ್ನಲ್ಲಿ ತುಂಬಿ ಮೃತದೇಹವನ್ನು ಎಸೆದಿರುವ ಘಟನೆ ನಗರದಲ್ಲಿ ನಡೆದಿದೆ.
ಆರೋಪಿಯನ್ನು ಅಂಬುಜ್ ತಿವಾರಿ ಎಂದು ಗುರುತಿಸಲಾಗಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿ ನೀಲಂ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಅನುಮಾನ ಪಟ್ಟು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಏನಿದು ಪ್ರಕರಣ?
ಜುಲೈ 23 ರಂದು ಆರೋಪಿ ತಿವಾರಿಯ ತಂದೆ ಮಹೇಂದ್ರ ಪೊಲೀಸ್ ಠಾಣೆಗೆ ಬಂದು ತಮ್ಮ ಮಗ ಮತ್ತು ಸೊಸೆ ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದರು. ನನ್ನ ಮಗ ಸಿಮೆಂಟ್ ಕಾರ್ಖಾನೆಯಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ. ಸೊಸೆ ಗೃಹಿಣಿಯಾಗಿದ್ದು, ಜುಲೈ 22 ರಂದು ಇಬ್ಬರೂ ನಾಪತ್ತೆಯಾಗಿದ್ದರು ಎಂದು ಮಹೇಂದ್ರ ಪೊಲೀಸರಿಗೆ ತಿಳಿಸಿದ್ದರು.
ದೂರು ದಾಖಲಿಸಿಕೊಂಡ ನಂತರ ಪೊಲೀಸರು ದಂಪತಿಗಾಗಿ ಹುಡುಕಲು ಪ್ರಾರಂಭಿಸಿದ್ದರು. ಮಂಗಳವಾರ ಘನ್ಸೋಲಿಯಲ್ಲಿ ತಿವಾರಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ವೇಳೆ ಪೊಲೀಸರು ಪತ್ನಿಯ ಬಗ್ಗೆ ಪ್ರಶ್ನಿ ಮಾಡಿದ್ದಾರೆ. ಆಗ ಆರೋಪಿ ಪೊಲೀಸರ ಪ್ರಶ್ನೆಗೆ ಸರಿಯಾಗಿ ಉತ್ತರಿಸಲಿಲ್ಲ. ಇದರಿಂದ ಅನುಮಾನಗೊಂಡ ಪೊಲೀಸರು ಆರೋಪಿ ಅಂಬುಜ್ನನ್ನ ತೀವ್ರವಾಗಿ ವಿಚಾರಣೆ ಮಾಡಿದ್ದಾರೆ.
ಆಗ ಆರೋಪಿ ಪತ್ನಿಯನ್ನು ತಾನೇ ಕೊಲೆ ಮಾಡಿ ಶವವನ್ನು ಲೋನವಾಲಾದಲ್ಲಿ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಪೊಲೀಸರು ಅಂಬುಜ್ನನ್ನು ಮೃತದೇಹವನ್ನು ಎಸೆದಿರುವ ಜಾಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಡ್ರಮ್ನಲ್ಲಿ ಪತ್ನಿಯ ಮೃತದೇಹ ಪತ್ತೆಯಾಗಿದೆ.
ಆರೋಪಿ ತನ್ನ ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನಪಟ್ಟಿದ್ದನು. ಈ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಜುಲೈ 23 ರಂದು ಅಂಬುಜ್ ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಪತ್ನಿ ನೀಲಂಗೆ ತನ್ನ ಸ್ನೇಹಿತ ಶ್ರೀಕಾಂತ್ ಚೌಬೆ ಮನೆಗೆ ಹೋಗಬೇಕೆಂದು ಹೇಳಿದ್ದನು. ಆದರೆ ಮತ್ತೆ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಕೋಪಗೊಂಡ ಆರೋಪಿ ತಿವಾರಿ ಆಕೆಯ ದುಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ನೇಹಿತ ಚೌಬೆ ಮನೆಗೆ ಕರೆದು ಪತ್ನಿಯನ್ನು ಕೊಲೆ ಮಾಡಿರುವ ಬಗ್ಗೆ ತಿಳಿಸಿದ್ದಾನೆ. ನಂತರ ನೀಲಂ ಮೃತದೇಹವನ್ನು ಎಸೆಯಲು ಆರೋಪಿ ತಿವಾರಿಗೆ ಸ್ನೇಹಿತ ಸಹಾಯ ಮಾಡಿದ್ದಾನೆ. ನಂತರ ಇಬ್ಬರು ಸೇರಿಕೊಂಡು ಮೃತದೇಹವನ್ನು ಡ್ರಮ್ನಲ್ಲಿ ತುಂಬಿ ಇಟ್ಟು ಲೋನಾವಾಲಾ ಬಳಿಯ ಪೊದೆಗಳಲ್ಲಿ ಎಸೆದಿದ್ದರು.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 10:35 am
HK News Staffer
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am