ಬ್ರೇಕಿಂಗ್ ನ್ಯೂಸ್
31-07-20 06:45 pm Headline Karnataka News Network ಕ್ರೈಂ
ಮುಂಬೈ: ಕೌಟುಂಬಿಕ ಕಲಹದಿಂದ ಸ್ನೇಹಿತನ ಸಹಾಯದಿಂದ ಪತ್ನಿಯನ್ನೇ ಕೊಂದು ಡ್ರಮ್ನಲ್ಲಿ ತುಂಬಿ ಮೃತದೇಹವನ್ನು ಎಸೆದಿರುವ ಘಟನೆ ನಗರದಲ್ಲಿ ನಡೆದಿದೆ.
ಆರೋಪಿಯನ್ನು ಅಂಬುಜ್ ತಿವಾರಿ ಎಂದು ಗುರುತಿಸಲಾಗಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿ ನೀಲಂ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಅನುಮಾನ ಪಟ್ಟು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಏನಿದು ಪ್ರಕರಣ?
ಜುಲೈ 23 ರಂದು ಆರೋಪಿ ತಿವಾರಿಯ ತಂದೆ ಮಹೇಂದ್ರ ಪೊಲೀಸ್ ಠಾಣೆಗೆ ಬಂದು ತಮ್ಮ ಮಗ ಮತ್ತು ಸೊಸೆ ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದರು. ನನ್ನ ಮಗ ಸಿಮೆಂಟ್ ಕಾರ್ಖಾನೆಯಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ. ಸೊಸೆ ಗೃಹಿಣಿಯಾಗಿದ್ದು, ಜುಲೈ 22 ರಂದು ಇಬ್ಬರೂ ನಾಪತ್ತೆಯಾಗಿದ್ದರು ಎಂದು ಮಹೇಂದ್ರ ಪೊಲೀಸರಿಗೆ ತಿಳಿಸಿದ್ದರು.
ದೂರು ದಾಖಲಿಸಿಕೊಂಡ ನಂತರ ಪೊಲೀಸರು ದಂಪತಿಗಾಗಿ ಹುಡುಕಲು ಪ್ರಾರಂಭಿಸಿದ್ದರು. ಮಂಗಳವಾರ ಘನ್ಸೋಲಿಯಲ್ಲಿ ತಿವಾರಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ವೇಳೆ ಪೊಲೀಸರು ಪತ್ನಿಯ ಬಗ್ಗೆ ಪ್ರಶ್ನಿ ಮಾಡಿದ್ದಾರೆ. ಆಗ ಆರೋಪಿ ಪೊಲೀಸರ ಪ್ರಶ್ನೆಗೆ ಸರಿಯಾಗಿ ಉತ್ತರಿಸಲಿಲ್ಲ. ಇದರಿಂದ ಅನುಮಾನಗೊಂಡ ಪೊಲೀಸರು ಆರೋಪಿ ಅಂಬುಜ್ನನ್ನ ತೀವ್ರವಾಗಿ ವಿಚಾರಣೆ ಮಾಡಿದ್ದಾರೆ.
ಆಗ ಆರೋಪಿ ಪತ್ನಿಯನ್ನು ತಾನೇ ಕೊಲೆ ಮಾಡಿ ಶವವನ್ನು ಲೋನವಾಲಾದಲ್ಲಿ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಪೊಲೀಸರು ಅಂಬುಜ್ನನ್ನು ಮೃತದೇಹವನ್ನು ಎಸೆದಿರುವ ಜಾಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಡ್ರಮ್ನಲ್ಲಿ ಪತ್ನಿಯ ಮೃತದೇಹ ಪತ್ತೆಯಾಗಿದೆ.
ಆರೋಪಿ ತನ್ನ ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನಪಟ್ಟಿದ್ದನು. ಈ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಜುಲೈ 23 ರಂದು ಅಂಬುಜ್ ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಪತ್ನಿ ನೀಲಂಗೆ ತನ್ನ ಸ್ನೇಹಿತ ಶ್ರೀಕಾಂತ್ ಚೌಬೆ ಮನೆಗೆ ಹೋಗಬೇಕೆಂದು ಹೇಳಿದ್ದನು. ಆದರೆ ಮತ್ತೆ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಕೋಪಗೊಂಡ ಆರೋಪಿ ತಿವಾರಿ ಆಕೆಯ ದುಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ನೇಹಿತ ಚೌಬೆ ಮನೆಗೆ ಕರೆದು ಪತ್ನಿಯನ್ನು ಕೊಲೆ ಮಾಡಿರುವ ಬಗ್ಗೆ ತಿಳಿಸಿದ್ದಾನೆ. ನಂತರ ನೀಲಂ ಮೃತದೇಹವನ್ನು ಎಸೆಯಲು ಆರೋಪಿ ತಿವಾರಿಗೆ ಸ್ನೇಹಿತ ಸಹಾಯ ಮಾಡಿದ್ದಾನೆ. ನಂತರ ಇಬ್ಬರು ಸೇರಿಕೊಂಡು ಮೃತದೇಹವನ್ನು ಡ್ರಮ್ನಲ್ಲಿ ತುಂಬಿ ಇಟ್ಟು ಲೋನಾವಾಲಾ ಬಳಿಯ ಪೊದೆಗಳಲ್ಲಿ ಎಸೆದಿದ್ದರು.
04-07-26 02:51 pm
HK News Staffer
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
06-07-26 01:14 pm
HK News Staffer
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
05-07-26 10:15 pm
HK News Desk
ಉನ್ನತ ಶಿಕ್ಷಣಕ್ಕಾಗಿ ಜರ್ಮನಿ ತೆರಳಿದ್ದ ಮಂಗಳೂರಿನ ಯ...
05-07-26 09:34 pm
Panambur Block, Mangalore: ಪಣಂಬೂರು ಹೆದ್ದಾರಿಯಲ...
05-07-26 06:33 pm
Kuloor Accident: ಕುಳೂರು ಬಳಿ ಸ್ಕೂಟರ್ ಗೆ ಟ್ಯಾಂಕ...
03-07-26 10:17 pm
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
06-07-26 12:28 pm
HK News Staffer
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am
ಅಯೋಧ್ಯೆ ರಾಮ ಮಂದಿರ ಬೆನ್ನಲ್ಲೇ ಬದರಿನಾಥ ಕ್ಷೇತ್ರದಲ...
04-07-26 09:47 pm
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm
ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ರಿಯಲ್ ಎಸ್ಟೇಟ್ ಉದ್...
04-07-26 06:54 pm