ಬ್ರೇಕಿಂಗ್ ನ್ಯೂಸ್
22-04-21 05:27 pm Mangalore Correspondent ಕ್ರೈಂ
ಮಂಗಳೂರು, ಎ.22: ಕೇರಳದಲ್ಲಿ ನಾಯಿಯನ್ನು ದರ ದರನೆ ಎಳ್ಕೊಂಡು ಹೋಗಿದ್ದು ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಅದರ ಬಗ್ಗೆ ಮಾನವೀಯತೆ ಇಲ್ಲದವರು ಎಂಬ ಆಕ್ರೋಶವೂ ಕೇಳಿಬಂದಿತ್ತು. ಆದರೆ, ಈಗ ಅಂಥದ್ದೇ ಘಟನೆ ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲೂ ನಡೆದಿದೆ. ನಾಯಿಯನ್ನು ಹಗ್ಗದಲ್ಲಿ ಕಟ್ಟಿ ಬೈಕಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಳ್ಕೊಂಡು ಹೋಗುವ ಘಟನೆಯ ವಿಡಿಯೋ ವೈರಲ್ ಆಗಿದ್ದು, ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಸುರತ್ಕಲ್ ಬಳಿಯ ಎನ್ಐಟಿಕೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ವಿಡಿಯೋ ನೋಡಿದರೆ ಅಲ್ಲಿನ ಮೇಲ್ಸೇತುವೆಯಲ್ಲಿ ವಿಡಿಯೋ ಅಂತ್ಯವಾಗುತ್ತದೆ. ಬೈಕಿಗೆ ನಾಯಿಯನ್ನು ಕಟ್ಟಿದ್ದು, ಬೈಕಿನಲ್ಲಿ ಇಬ್ಬರು ಮಧ್ಯ ವಯಸ್ಕರು ಕುಳಿತಿದ್ದಾರೆ. ಇದನ್ನು ಇನ್ಯಾರೋ ಬೇರೊಂದು ಬೈಕಿನಲ್ಲಿದ್ದವರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ.
ಎಪ್ರಿಲ್ 15ರಂದು ರಾತ್ರಿ 8.30ರ ಸುಮಾರಿಗೆ ಘಟನೆ ನಡೆದಿದೆ ಎನ್ನಲಾಗುತ್ತಿದೆ. ವಿಡಿಯೋ ಈಗ ಭಾರೀ ಷೇರ್ ಆಗಿದ್ದು ಮನುಷ್ಯತ್ವ ಇಲ್ಲದೆ ವರ್ತಿಸಿದವರನ್ನು ಬಂಧಿಸುವಂತೆ ಒತ್ತಾಯ ಕೇಳಿಬಂದಿದೆ. ಮಂಗಳೂರಿನ ಪೊಲೀಸರು ಇನ್ನೂ ಇದರ ಬಗ್ಗೆ ಎಚ್ಚತ್ತುಕೊಂಡಿಲ್ಲ.
ಕೇರಳದ ಮಲ್ಲಪ್ಪುರಂ ಜಿಲ್ಲೆಯ ಎಡಕ್ಕರ ಎಂಬಲ್ಲಿ ಇದೇ ಎಪ್ರಿಲ್ 15ರಂದು ಇದೇ ರೀತಿ ನಾಯಿಯನ್ನು ಒಬ್ಬಾತ ಬೈಕಿಗೆ ಕಟ್ಟಿ ಎಳ್ಕೊಂಡು ಹೋದ ಘಟನೆ ನಡೆದಿತ್ತು. ವಿಡಿಯೋ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಕ್ಸೇವಿಯರ್ ಎನ್ನುವ 53 ವರ್ಷದ ಆರೋಪಿ, ಆತನ ಚಪ್ಪಲಿಯನ್ನು ಕಚ್ಚಿ ತುಂಡರಿಸಿದ್ದ ಕೋಪದಲ್ಲಿ ಮನೆಯಲ್ಲಿದ್ದ ನಾಯಿಯನ್ನು ರಸ್ತೆಯಲ್ಲಿ ಎಳ್ಕೊಂಡು ಹೋಗಿದ್ದ.
A pet dog was tied to a two-wheeler and dragged along a road at NITK Surathkal in Mangalore. The incident took place on April 15th, 2021. A video of the incident has gone viral.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm