ಬ್ರೇಕಿಂಗ್ ನ್ಯೂಸ್
22-04-21 05:27 pm Mangalore Correspondent ಕ್ರೈಂ
ಮಂಗಳೂರು, ಎ.22: ಕೇರಳದಲ್ಲಿ ನಾಯಿಯನ್ನು ದರ ದರನೆ ಎಳ್ಕೊಂಡು ಹೋಗಿದ್ದು ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಅದರ ಬಗ್ಗೆ ಮಾನವೀಯತೆ ಇಲ್ಲದವರು ಎಂಬ ಆಕ್ರೋಶವೂ ಕೇಳಿಬಂದಿತ್ತು. ಆದರೆ, ಈಗ ಅಂಥದ್ದೇ ಘಟನೆ ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲೂ ನಡೆದಿದೆ. ನಾಯಿಯನ್ನು ಹಗ್ಗದಲ್ಲಿ ಕಟ್ಟಿ ಬೈಕಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಳ್ಕೊಂಡು ಹೋಗುವ ಘಟನೆಯ ವಿಡಿಯೋ ವೈರಲ್ ಆಗಿದ್ದು, ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಸುರತ್ಕಲ್ ಬಳಿಯ ಎನ್ಐಟಿಕೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ವಿಡಿಯೋ ನೋಡಿದರೆ ಅಲ್ಲಿನ ಮೇಲ್ಸೇತುವೆಯಲ್ಲಿ ವಿಡಿಯೋ ಅಂತ್ಯವಾಗುತ್ತದೆ. ಬೈಕಿಗೆ ನಾಯಿಯನ್ನು ಕಟ್ಟಿದ್ದು, ಬೈಕಿನಲ್ಲಿ ಇಬ್ಬರು ಮಧ್ಯ ವಯಸ್ಕರು ಕುಳಿತಿದ್ದಾರೆ. ಇದನ್ನು ಇನ್ಯಾರೋ ಬೇರೊಂದು ಬೈಕಿನಲ್ಲಿದ್ದವರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ.

ಎಪ್ರಿಲ್ 15ರಂದು ರಾತ್ರಿ 8.30ರ ಸುಮಾರಿಗೆ ಘಟನೆ ನಡೆದಿದೆ ಎನ್ನಲಾಗುತ್ತಿದೆ. ವಿಡಿಯೋ ಈಗ ಭಾರೀ ಷೇರ್ ಆಗಿದ್ದು ಮನುಷ್ಯತ್ವ ಇಲ್ಲದೆ ವರ್ತಿಸಿದವರನ್ನು ಬಂಧಿಸುವಂತೆ ಒತ್ತಾಯ ಕೇಳಿಬಂದಿದೆ. ಮಂಗಳೂರಿನ ಪೊಲೀಸರು ಇನ್ನೂ ಇದರ ಬಗ್ಗೆ ಎಚ್ಚತ್ತುಕೊಂಡಿಲ್ಲ.
ಕೇರಳದ ಮಲ್ಲಪ್ಪುರಂ ಜಿಲ್ಲೆಯ ಎಡಕ್ಕರ ಎಂಬಲ್ಲಿ ಇದೇ ಎಪ್ರಿಲ್ 15ರಂದು ಇದೇ ರೀತಿ ನಾಯಿಯನ್ನು ಒಬ್ಬಾತ ಬೈಕಿಗೆ ಕಟ್ಟಿ ಎಳ್ಕೊಂಡು ಹೋದ ಘಟನೆ ನಡೆದಿತ್ತು. ವಿಡಿಯೋ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಕ್ಸೇವಿಯರ್ ಎನ್ನುವ 53 ವರ್ಷದ ಆರೋಪಿ, ಆತನ ಚಪ್ಪಲಿಯನ್ನು ಕಚ್ಚಿ ತುಂಡರಿಸಿದ್ದ ಕೋಪದಲ್ಲಿ ಮನೆಯಲ್ಲಿದ್ದ ನಾಯಿಯನ್ನು ರಸ್ತೆಯಲ್ಲಿ ಎಳ್ಕೊಂಡು ಹೋಗಿದ್ದ.
A pet dog was tied to a two-wheeler and dragged along a road at NITK Surathkal in Mangalore. The incident took place on April 15th, 2021. A video of the incident has gone viral.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm