ಬ್ರೇಕಿಂಗ್ ನ್ಯೂಸ್
22-04-21 05:27 pm Mangalore Correspondent ಕ್ರೈಂ
ಮಂಗಳೂರು, ಎ.22: ಕೇರಳದಲ್ಲಿ ನಾಯಿಯನ್ನು ದರ ದರನೆ ಎಳ್ಕೊಂಡು ಹೋಗಿದ್ದು ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಅದರ ಬಗ್ಗೆ ಮಾನವೀಯತೆ ಇಲ್ಲದವರು ಎಂಬ ಆಕ್ರೋಶವೂ ಕೇಳಿಬಂದಿತ್ತು. ಆದರೆ, ಈಗ ಅಂಥದ್ದೇ ಘಟನೆ ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲೂ ನಡೆದಿದೆ. ನಾಯಿಯನ್ನು ಹಗ್ಗದಲ್ಲಿ ಕಟ್ಟಿ ಬೈಕಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಳ್ಕೊಂಡು ಹೋಗುವ ಘಟನೆಯ ವಿಡಿಯೋ ವೈರಲ್ ಆಗಿದ್ದು, ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಸುರತ್ಕಲ್ ಬಳಿಯ ಎನ್ಐಟಿಕೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ವಿಡಿಯೋ ನೋಡಿದರೆ ಅಲ್ಲಿನ ಮೇಲ್ಸೇತುವೆಯಲ್ಲಿ ವಿಡಿಯೋ ಅಂತ್ಯವಾಗುತ್ತದೆ. ಬೈಕಿಗೆ ನಾಯಿಯನ್ನು ಕಟ್ಟಿದ್ದು, ಬೈಕಿನಲ್ಲಿ ಇಬ್ಬರು ಮಧ್ಯ ವಯಸ್ಕರು ಕುಳಿತಿದ್ದಾರೆ. ಇದನ್ನು ಇನ್ಯಾರೋ ಬೇರೊಂದು ಬೈಕಿನಲ್ಲಿದ್ದವರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ.

ಎಪ್ರಿಲ್ 15ರಂದು ರಾತ್ರಿ 8.30ರ ಸುಮಾರಿಗೆ ಘಟನೆ ನಡೆದಿದೆ ಎನ್ನಲಾಗುತ್ತಿದೆ. ವಿಡಿಯೋ ಈಗ ಭಾರೀ ಷೇರ್ ಆಗಿದ್ದು ಮನುಷ್ಯತ್ವ ಇಲ್ಲದೆ ವರ್ತಿಸಿದವರನ್ನು ಬಂಧಿಸುವಂತೆ ಒತ್ತಾಯ ಕೇಳಿಬಂದಿದೆ. ಮಂಗಳೂರಿನ ಪೊಲೀಸರು ಇನ್ನೂ ಇದರ ಬಗ್ಗೆ ಎಚ್ಚತ್ತುಕೊಂಡಿಲ್ಲ.
ಕೇರಳದ ಮಲ್ಲಪ್ಪುರಂ ಜಿಲ್ಲೆಯ ಎಡಕ್ಕರ ಎಂಬಲ್ಲಿ ಇದೇ ಎಪ್ರಿಲ್ 15ರಂದು ಇದೇ ರೀತಿ ನಾಯಿಯನ್ನು ಒಬ್ಬಾತ ಬೈಕಿಗೆ ಕಟ್ಟಿ ಎಳ್ಕೊಂಡು ಹೋದ ಘಟನೆ ನಡೆದಿತ್ತು. ವಿಡಿಯೋ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಕ್ಸೇವಿಯರ್ ಎನ್ನುವ 53 ವರ್ಷದ ಆರೋಪಿ, ಆತನ ಚಪ್ಪಲಿಯನ್ನು ಕಚ್ಚಿ ತುಂಡರಿಸಿದ್ದ ಕೋಪದಲ್ಲಿ ಮನೆಯಲ್ಲಿದ್ದ ನಾಯಿಯನ್ನು ರಸ್ತೆಯಲ್ಲಿ ಎಳ್ಕೊಂಡು ಹೋಗಿದ್ದ.
A pet dog was tied to a two-wheeler and dragged along a road at NITK Surathkal in Mangalore. The incident took place on April 15th, 2021. A video of the incident has gone viral.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am