ಮಂಗಳೂರು ಜೈಲಿನಲ್ಲಿ ಕೈದಿಗಳ ಮಾರಾಮಾರಿ ; ದರೋಡೆ ಪ್ರಕರಣದ ಆರೋಪಿಗಳ ಹೊಡೆದಾಟ 

25-04-21 10:26 am       Mangaluru Correspondent   ಕ್ರೈಂ

ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು ಇಬ್ಬರು ಗಾಯಗೊಂಡಿದ್ದಾರೆ. 

ಮಂಗಳೂರು, ಎ.25: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು ಇಬ್ಬರು ಗಾಯಗೊಂಡಿದ್ದಾರೆ. 

ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಸಮೀರ್ ಎಂಬಾತ ಜೈಲಿನಲ್ಲಿದ್ದ ಇತರ ವಿಚಾರಣಾಧೀನ ಕೈದಿಗಳಿಗೆ ಹಲ್ಲೆ ನಡೆಸಿದ್ದಾನೆ. ಮುಲ್ಕಿ ಠಾಣೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದ ಅನ್ಸಾರ್ ಮೇಲೆ ಹಲ್ಲೆ ನಡೆಸಿದ್ದಾನೆ. 

ಸ್ಟೀಲ್ ಚಮಚ ಮತ್ತಿತರ ಕಿಚನ್ ಸಾಮಗ್ರಿಗಳನ್ನು ಬಳಸಿ, ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಅನ್ಸಾರ್ ಮತ್ತು ಮೂಡುಬಿದ್ರೆ ದರೋಡೆ ಪ್ರಕರಣದ ಜೈನುದ್ದೀನ್ ಎಂಬಾತ ಕೂಡ ಗಾಯಗೊಂಡಿದ್ದಾನೆ. 

ಅನ್ಸಾರ್ ಕೈ ಮತ್ತು ಕಾಲಿಗೆ ಗಾಯಗಳಾಗಿದ್ದರೆ, ಜೈನುದ್ದೀನ್ ಭುಜ ಮತ್ತು ಬೆನ್ನಿಗೆ ಗಾಯಗಳಾಗಿವೆ. ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವ ಕೆಲಸ ಆಗ್ತಿದೆ. 

ಬೆಳಗ್ಗಿನ ಉಪಾಹಾರದ ಸಮಯದಲ್ಲಿ ಮಾರಾಮಾರಿ ನಡೆದಿದೆ. ಜೈಲಿಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ. ಕಮಿಷನರ್ ಒಳಗೆ ಹೋಗುತ್ತಲೇ ಜೋರು ದನಿಯಲ್ಲಿ ಒಳಗಿಂದ ಬೊಬ್ಬೆ ಕೇಳಿದ್ದು ಘಟನೆಯಲ್ಲಿ ಪಾಲ್ಗೊಂಡವರಿಗೆ ಬೆನ್ನಿಗೆ ಬೆತ್ತದ ರುಚಿ ಕಾಣಿಸಿದ್ದಾರೆ.

Two inmates hospitalised after a accused attacked them using kitchen items in Mangalore Jail. Police commissioner Shahsi Kumar has arrived at the jail for further investigation.