ಬ್ರೇಕಿಂಗ್ ನ್ಯೂಸ್
28-04-21 10:08 am Mangalore Correspondent ಕ್ರೈಂ
Photo credits : ungender
ಮಂಗಳೂರು, ಎ.28: ನಗರ ಹೊರ ವಲಯದ ಅರ್ಕುಳ ಗ್ರಾಮದ ಅಡ್ಯಾರ್ ಗುಡ್ಡೆ ಎಂಬಲ್ಲಿ ಎರಡು ವರ್ಷದ ಹಿಂದೆ ಅಪ್ರಾಪ್ತೆ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದಿದ್ದ ಪ್ರಮುಖ ಆರೋಪಿ ನಝೀರ್ ಎಂಬಾತನಿಗೆ 12 ವರ್ಷ ಕಠಿಣ ಶಿಕ್ಷೆ ಹಾಗೂ 1.16 ಲಕ್ಷ ರೂ. ದಂಡ ವಿಧಿಸಿ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಫೋಕ್ಸೊ ತ್ವರಿತ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ. ಮತ್ತೋರ್ವ ಆರೋಪಿ ಶಮೀರ್ಗೆ 6 ತಿಂಗಳು ಶಿಕ್ಷೆ ಹಾಗೂ 3 ಸಾವಿರ ರೂ. ದಂಡ ವಿಧಿಸಿದೆ.
ಪ್ರಕರಣದ ಹಿನ್ನೆಲೆ:
2019 ಫೆ.9ರಂದು ಪ್ರಕರಣದ ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತ ಅಡ್ಯಾರ್ ಬಳಿ ಇರುವ ಗುಡ್ಡೆಯ ಕಲ್ಲು ಬಂಡೆಯ ಮೇಲೆ ಕುಳಿತಿದ್ದಾಗ ಅಲ್ಲಿಗೆ ಬಂದ ವಳಚ್ಚಿಲ್ ಪದವು ನಿವಾಸಿಗಳಾದ ನಝೀರ್ ಮತ್ತು ಶಮೀರ್ ಇಬ್ಬರ ಫೊಟೋ ತೆಗೆದು ವಿಡಿಯೋ ಮಾಡಿ ಜೋಡಿಯನ್ನು ವಿಚಾರಿಸಿದ್ದರು. ಬಳಿಕ ಫೊಟೋ, ವಿಡಿಯೋ ಡಿಲೀಟ್ ಮಾಡಲು 20 ಸಾವಿರ ರೂ. ನೀಡಬೇಕು. ಇಲ್ಲದಿದ್ದರೆ ಪೊಲೀಸರಿಗೆ ತಿಳಿಸುತ್ತೇವೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತೇವೆ ಎಂದು ಬೆದರಿಸಿದ್ದರು. ‘ನಾವು ವಿದ್ಯಾರ್ಥಿಗಳು ಅಷ್ಟು ಹಣ ನಮ್ಮಲ್ಲಿಲ್ಲ ಎಂದು ಸಂತ್ರಸ್ತರು ಹೇಳಿದರೂ ಕೇಳದ ಆರೋಪಿಗಳು ಅಪ್ರಾಪ್ತೆಯ ಜತೆಗಿದ್ದ ಆಕೆ ಸ್ನೇಹಿತನ ಎಟಿಎಂ ಕಸಿದು ಹಣ ಡ್ರಾ ಮಾಡಿಕೊಂಡು ಬರಲು ಶಮೀರ್ ಹೋಗಿದ್ದ.
ಆದರೆ ಹಣ ಬರದೆ ಇದ್ದಾಗ ಕರೆ ಮಾಡಿ ಆಕೆಯ ಸ್ನೇಹಿತನನ್ನು ಬರಲು ಹೇಳಿದ್ದಾನೆ. ಈ ಸಂದರ್ಭ ನಝೀರ್ ಅಪ್ರಾಪ್ತೆಯನ್ನು ಅತ್ಯಾಚಾರ ನಡೆಸಿದ್ದ. 1 ಸಾವಿರ ರೂ. ಡ್ರಾ ಮಾಡಿಕೊಂಡು ಬಂದ ಬಳಿಕ ಶಮೀರ್ ಕೂಡಾ ಆಕೆಯನ್ನು ಅತ್ಯಾಚಾರಗೈದಿದ್ದ. ಬಳಿಕ ಈ ವಿಷಯ ಯಾರಿಗಾದರೂ ತಿಳಿಸಿದರೆ ವಿಡಿಯೋ ವೈರಲ್ ಮಾಡುತ್ತೇವೆ ಎಂದು ಬೆದರಿಸಿದ್ದರು ಎಂದು ಆರೋಪಿಸಲಾಗಿದೆ. ಘಟನೆ ನಡೆದು ಒಂದು ವಾರವಾದರೂ ಸಂತ್ರಸ್ತರು ಪೊಲೀಸ್ ಠಾಣೆಗೆ ದೂರು ನೀಡಿರಲಿಲ್ಲ. ಅಪರಾಧಿಗಳು ಹಣ ನೀಡುವಂತೆ ಕರೆ ಮಾಡಿ ಮತ್ತೆ ಕಿರುಕುಳ ನೀಡಿದ್ದರು. ಕೊನೆಗೂ ಫೆ.18ರಂದು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಆಗಿನ ಇನ್ಸ್ಪೆಕ್ಟರ್ ಕಲಾವತಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ 15 ಸಾಕ್ಷಿದಾರರನ್ನು ಹಾಗೂ 21 ದಾಖಲೆಗಳನ್ನು ವಿಚಾರಣೆ ನಡೆಸಿದ್ದರು. ವಿಶೇಷ ಸರಕಾರಿ ಅಭಿಯೋಜಕ ವೆಂಕಟ್ರಮಣ ಸ್ವಾಮಿ ಸಿ. ಸರಕಾರದ ಪರವಾಗಿ ವಾದಿಸಿದ್ದರು.
ನಝೀರ್ ದಂಡದ ಮೊತ್ತದಲ್ಲಿ 1 ಲಕ್ಷ ರೂ. ಸಂತ್ರಸ್ತೆಗೆ ನೀಡಬೇಕು. ಕಾನೂನು ಸೇವಾ ಪ್ರಾಧಿಕಾರದಿಂದ 2 ಲಕ್ಷ ರೂ. ಪರಿಹಾರ ನೀಡಬೇಕು ಎಂದು ನ್ಯಾಯಾಲಯ ಮಂಗಳವಾರ ನೀಡಿದ ಆದೇಶದಲ್ಲಿ ತಿಳಿಸಿದೆ.
A court here has handed down 12 years of rigorous imprisonment to a youth accused of raping a college student and divesting her of the money she had with her. This incident had happened on February 9, 2019.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm