ಬ್ರೇಕಿಂಗ್ ನ್ಯೂಸ್
28-04-21 10:08 am Mangalore Correspondent ಕ್ರೈಂ
Photo credits : ungender
ಮಂಗಳೂರು, ಎ.28: ನಗರ ಹೊರ ವಲಯದ ಅರ್ಕುಳ ಗ್ರಾಮದ ಅಡ್ಯಾರ್ ಗುಡ್ಡೆ ಎಂಬಲ್ಲಿ ಎರಡು ವರ್ಷದ ಹಿಂದೆ ಅಪ್ರಾಪ್ತೆ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದಿದ್ದ ಪ್ರಮುಖ ಆರೋಪಿ ನಝೀರ್ ಎಂಬಾತನಿಗೆ 12 ವರ್ಷ ಕಠಿಣ ಶಿಕ್ಷೆ ಹಾಗೂ 1.16 ಲಕ್ಷ ರೂ. ದಂಡ ವಿಧಿಸಿ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಫೋಕ್ಸೊ ತ್ವರಿತ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ. ಮತ್ತೋರ್ವ ಆರೋಪಿ ಶಮೀರ್ಗೆ 6 ತಿಂಗಳು ಶಿಕ್ಷೆ ಹಾಗೂ 3 ಸಾವಿರ ರೂ. ದಂಡ ವಿಧಿಸಿದೆ.
ಪ್ರಕರಣದ ಹಿನ್ನೆಲೆ:
2019 ಫೆ.9ರಂದು ಪ್ರಕರಣದ ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತ ಅಡ್ಯಾರ್ ಬಳಿ ಇರುವ ಗುಡ್ಡೆಯ ಕಲ್ಲು ಬಂಡೆಯ ಮೇಲೆ ಕುಳಿತಿದ್ದಾಗ ಅಲ್ಲಿಗೆ ಬಂದ ವಳಚ್ಚಿಲ್ ಪದವು ನಿವಾಸಿಗಳಾದ ನಝೀರ್ ಮತ್ತು ಶಮೀರ್ ಇಬ್ಬರ ಫೊಟೋ ತೆಗೆದು ವಿಡಿಯೋ ಮಾಡಿ ಜೋಡಿಯನ್ನು ವಿಚಾರಿಸಿದ್ದರು. ಬಳಿಕ ಫೊಟೋ, ವಿಡಿಯೋ ಡಿಲೀಟ್ ಮಾಡಲು 20 ಸಾವಿರ ರೂ. ನೀಡಬೇಕು. ಇಲ್ಲದಿದ್ದರೆ ಪೊಲೀಸರಿಗೆ ತಿಳಿಸುತ್ತೇವೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತೇವೆ ಎಂದು ಬೆದರಿಸಿದ್ದರು. ‘ನಾವು ವಿದ್ಯಾರ್ಥಿಗಳು ಅಷ್ಟು ಹಣ ನಮ್ಮಲ್ಲಿಲ್ಲ ಎಂದು ಸಂತ್ರಸ್ತರು ಹೇಳಿದರೂ ಕೇಳದ ಆರೋಪಿಗಳು ಅಪ್ರಾಪ್ತೆಯ ಜತೆಗಿದ್ದ ಆಕೆ ಸ್ನೇಹಿತನ ಎಟಿಎಂ ಕಸಿದು ಹಣ ಡ್ರಾ ಮಾಡಿಕೊಂಡು ಬರಲು ಶಮೀರ್ ಹೋಗಿದ್ದ.
ಆದರೆ ಹಣ ಬರದೆ ಇದ್ದಾಗ ಕರೆ ಮಾಡಿ ಆಕೆಯ ಸ್ನೇಹಿತನನ್ನು ಬರಲು ಹೇಳಿದ್ದಾನೆ. ಈ ಸಂದರ್ಭ ನಝೀರ್ ಅಪ್ರಾಪ್ತೆಯನ್ನು ಅತ್ಯಾಚಾರ ನಡೆಸಿದ್ದ. 1 ಸಾವಿರ ರೂ. ಡ್ರಾ ಮಾಡಿಕೊಂಡು ಬಂದ ಬಳಿಕ ಶಮೀರ್ ಕೂಡಾ ಆಕೆಯನ್ನು ಅತ್ಯಾಚಾರಗೈದಿದ್ದ. ಬಳಿಕ ಈ ವಿಷಯ ಯಾರಿಗಾದರೂ ತಿಳಿಸಿದರೆ ವಿಡಿಯೋ ವೈರಲ್ ಮಾಡುತ್ತೇವೆ ಎಂದು ಬೆದರಿಸಿದ್ದರು ಎಂದು ಆರೋಪಿಸಲಾಗಿದೆ. ಘಟನೆ ನಡೆದು ಒಂದು ವಾರವಾದರೂ ಸಂತ್ರಸ್ತರು ಪೊಲೀಸ್ ಠಾಣೆಗೆ ದೂರು ನೀಡಿರಲಿಲ್ಲ. ಅಪರಾಧಿಗಳು ಹಣ ನೀಡುವಂತೆ ಕರೆ ಮಾಡಿ ಮತ್ತೆ ಕಿರುಕುಳ ನೀಡಿದ್ದರು. ಕೊನೆಗೂ ಫೆ.18ರಂದು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಆಗಿನ ಇನ್ಸ್ಪೆಕ್ಟರ್ ಕಲಾವತಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ 15 ಸಾಕ್ಷಿದಾರರನ್ನು ಹಾಗೂ 21 ದಾಖಲೆಗಳನ್ನು ವಿಚಾರಣೆ ನಡೆಸಿದ್ದರು. ವಿಶೇಷ ಸರಕಾರಿ ಅಭಿಯೋಜಕ ವೆಂಕಟ್ರಮಣ ಸ್ವಾಮಿ ಸಿ. ಸರಕಾರದ ಪರವಾಗಿ ವಾದಿಸಿದ್ದರು.
ನಝೀರ್ ದಂಡದ ಮೊತ್ತದಲ್ಲಿ 1 ಲಕ್ಷ ರೂ. ಸಂತ್ರಸ್ತೆಗೆ ನೀಡಬೇಕು. ಕಾನೂನು ಸೇವಾ ಪ್ರಾಧಿಕಾರದಿಂದ 2 ಲಕ್ಷ ರೂ. ಪರಿಹಾರ ನೀಡಬೇಕು ಎಂದು ನ್ಯಾಯಾಲಯ ಮಂಗಳವಾರ ನೀಡಿದ ಆದೇಶದಲ್ಲಿ ತಿಳಿಸಿದೆ.
A court here has handed down 12 years of rigorous imprisonment to a youth accused of raping a college student and divesting her of the money she had with her. This incident had happened on February 9, 2019.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm