ಬ್ರೇಕಿಂಗ್ ನ್ಯೂಸ್
08-05-21 02:11 pm Bangalore Correspondent ಕ್ರೈಂ
ಬೆಂಗಳೂರು, ಮೇ 8 : ಜ್ಯೋತಿಷಿ ಮಾತು ಕೇಳಿದ 14ರ ಹರೆಯದ ಬಾಲಕ ಹೆತ್ತ ತಂದೆ, ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆಗೈದ ಪ್ರಕರಣ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಿನಗೆ ಪಿತೃದೋಷವಿದೆ. ನಿನ್ನ ತಂದೆ ಸತ್ತರೆ ಮಾತ್ರ ನಿನಗೆ ಒಳ್ಳೆದಾಗುತ್ತೆ... ಎಂಬ ಜ್ಯೋತಿಷಿಯ ಮಾತು ಕೇಳಿದ ಪುತ್ರ ಗಾಂಜಾ ಮತ್ತಿನಲ್ಲಿ ಜನ್ಮ ಕೊಟ್ಟ ತಂದೆ ತಾಯಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.

ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಹನುಮಂತರಾಯ (45) ಮತ್ತು ಹೊನ್ಮಮ್ಮ (34) ದಂಪತಿಯ ಶವ ಎರಡು ದಿನಗಳ ಹಿಂದೆ ಪತ್ತೆಯಾಗಿತ್ತು. ಕಚೇರಿ ಬಾತ್ ರೂಮ್ ನಲ್ಲಿ ಬಿದ್ದಿದ್ದ ದಂಪತಿಯನ್ನು ಯಾರೋ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದು ಕಂಡುಬಂದಿತ್ತು. ಪೀಣ್ಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಜೋಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು.

ಮೂಲತಃ ಯಾದಗಿರಿ ಜಿಲ್ಲೆಯ ಸುರಪುರದವರಾಗಿದ್ದ ದಂಪತಿ ಬೆಂಗಳೂರಿನಲ್ಲಿ ಕರಿಹೋಬನಹಳ್ಳಿಯ ಬೃಂದಾವನ ನಗರದ ಕಚೇರಿಯಲ್ಲಿ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದರು. ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಅದೇ ಕಚೇರಿಯ ಕೆ.ಎ.ಎಸ್. ಅಧಿಕಾರಿಯ ಚೇಂಬರ್ ನ ವಾಷ್ ರೂಂನಲ್ಲಿ ಎಸೆಯಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೀಣ್ಯ ಪೊಲೀಸರು, ಹನುಮಂತರಾಯ ಮತ್ತು ಹೊನ್ನಮ್ಮ ದಂಪತಿಯ ಎರಡನೇ ಪುತ್ರನನ್ನು ಬಂಧಿಸಿದ್ದು ಪ್ರಕರಣದ ನೈಜಾಂಶವನ್ನು ಹೊರಗೆಳೆದಿದ್ದಾರೆ. ಗಾಂಜಾ ದಾಸನಾಗಿದ್ದ ಹುಡುಗ ಜ್ಯೋತಿಷಿಯನ್ನು ಭೇಟಿ ಮಾಡಿ ಶಾಸ್ತ್ರ ಕೇಳಿದ್ದ. ನೀನು ಚೆನ್ನಾಗಿ ಇರಬೇಕಾದರೆ ನಿಮ್ಮ ತಂದೆ ಸಾಯಬೇಕು. ನಿನಗೆ ಪಿತೃದೋಷವಿದೆ ಎಂದು ಜ್ಯೋತಿಷಿ ಹೇಳಿದ್ದ. ಇದನ್ನೇ ನಂಬಿದ್ದ ಹದಿನಾಲ್ಕು ವರ್ಷದ ಪುತ್ರ ತಂದೆಯನ್ನು ಕೊಲೆ ಮಾಡಲು ಹೋಗಿ ಅಡ್ಡಬಂದ ತಾಯಿಯನ್ನೂ ಕೊಲೆಗೈದಿದ್ದಾನೆ.
In a shocking incident reported in Bangalore Acting on an astrologer's advice, a 14-year-old boy kills his parents.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm