ಬ್ರೇಕಿಂಗ್ ನ್ಯೂಸ್
08-05-21 02:11 pm Bangalore Correspondent ಕ್ರೈಂ
ಬೆಂಗಳೂರು, ಮೇ 8 : ಜ್ಯೋತಿಷಿ ಮಾತು ಕೇಳಿದ 14ರ ಹರೆಯದ ಬಾಲಕ ಹೆತ್ತ ತಂದೆ, ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆಗೈದ ಪ್ರಕರಣ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಿನಗೆ ಪಿತೃದೋಷವಿದೆ. ನಿನ್ನ ತಂದೆ ಸತ್ತರೆ ಮಾತ್ರ ನಿನಗೆ ಒಳ್ಳೆದಾಗುತ್ತೆ... ಎಂಬ ಜ್ಯೋತಿಷಿಯ ಮಾತು ಕೇಳಿದ ಪುತ್ರ ಗಾಂಜಾ ಮತ್ತಿನಲ್ಲಿ ಜನ್ಮ ಕೊಟ್ಟ ತಂದೆ ತಾಯಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.

ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಹನುಮಂತರಾಯ (45) ಮತ್ತು ಹೊನ್ಮಮ್ಮ (34) ದಂಪತಿಯ ಶವ ಎರಡು ದಿನಗಳ ಹಿಂದೆ ಪತ್ತೆಯಾಗಿತ್ತು. ಕಚೇರಿ ಬಾತ್ ರೂಮ್ ನಲ್ಲಿ ಬಿದ್ದಿದ್ದ ದಂಪತಿಯನ್ನು ಯಾರೋ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದು ಕಂಡುಬಂದಿತ್ತು. ಪೀಣ್ಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಜೋಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು.

ಮೂಲತಃ ಯಾದಗಿರಿ ಜಿಲ್ಲೆಯ ಸುರಪುರದವರಾಗಿದ್ದ ದಂಪತಿ ಬೆಂಗಳೂರಿನಲ್ಲಿ ಕರಿಹೋಬನಹಳ್ಳಿಯ ಬೃಂದಾವನ ನಗರದ ಕಚೇರಿಯಲ್ಲಿ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದರು. ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಅದೇ ಕಚೇರಿಯ ಕೆ.ಎ.ಎಸ್. ಅಧಿಕಾರಿಯ ಚೇಂಬರ್ ನ ವಾಷ್ ರೂಂನಲ್ಲಿ ಎಸೆಯಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೀಣ್ಯ ಪೊಲೀಸರು, ಹನುಮಂತರಾಯ ಮತ್ತು ಹೊನ್ನಮ್ಮ ದಂಪತಿಯ ಎರಡನೇ ಪುತ್ರನನ್ನು ಬಂಧಿಸಿದ್ದು ಪ್ರಕರಣದ ನೈಜಾಂಶವನ್ನು ಹೊರಗೆಳೆದಿದ್ದಾರೆ. ಗಾಂಜಾ ದಾಸನಾಗಿದ್ದ ಹುಡುಗ ಜ್ಯೋತಿಷಿಯನ್ನು ಭೇಟಿ ಮಾಡಿ ಶಾಸ್ತ್ರ ಕೇಳಿದ್ದ. ನೀನು ಚೆನ್ನಾಗಿ ಇರಬೇಕಾದರೆ ನಿಮ್ಮ ತಂದೆ ಸಾಯಬೇಕು. ನಿನಗೆ ಪಿತೃದೋಷವಿದೆ ಎಂದು ಜ್ಯೋತಿಷಿ ಹೇಳಿದ್ದ. ಇದನ್ನೇ ನಂಬಿದ್ದ ಹದಿನಾಲ್ಕು ವರ್ಷದ ಪುತ್ರ ತಂದೆಯನ್ನು ಕೊಲೆ ಮಾಡಲು ಹೋಗಿ ಅಡ್ಡಬಂದ ತಾಯಿಯನ್ನೂ ಕೊಲೆಗೈದಿದ್ದಾನೆ.
In a shocking incident reported in Bangalore Acting on an astrologer's advice, a 14-year-old boy kills his parents.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm