ಬ್ರೇಕಿಂಗ್ ನ್ಯೂಸ್
08-05-21 02:11 pm Bangalore Correspondent ಕ್ರೈಂ
ಬೆಂಗಳೂರು, ಮೇ 8 : ಜ್ಯೋತಿಷಿ ಮಾತು ಕೇಳಿದ 14ರ ಹರೆಯದ ಬಾಲಕ ಹೆತ್ತ ತಂದೆ, ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆಗೈದ ಪ್ರಕರಣ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಿನಗೆ ಪಿತೃದೋಷವಿದೆ. ನಿನ್ನ ತಂದೆ ಸತ್ತರೆ ಮಾತ್ರ ನಿನಗೆ ಒಳ್ಳೆದಾಗುತ್ತೆ... ಎಂಬ ಜ್ಯೋತಿಷಿಯ ಮಾತು ಕೇಳಿದ ಪುತ್ರ ಗಾಂಜಾ ಮತ್ತಿನಲ್ಲಿ ಜನ್ಮ ಕೊಟ್ಟ ತಂದೆ ತಾಯಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.

ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಹನುಮಂತರಾಯ (45) ಮತ್ತು ಹೊನ್ಮಮ್ಮ (34) ದಂಪತಿಯ ಶವ ಎರಡು ದಿನಗಳ ಹಿಂದೆ ಪತ್ತೆಯಾಗಿತ್ತು. ಕಚೇರಿ ಬಾತ್ ರೂಮ್ ನಲ್ಲಿ ಬಿದ್ದಿದ್ದ ದಂಪತಿಯನ್ನು ಯಾರೋ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದು ಕಂಡುಬಂದಿತ್ತು. ಪೀಣ್ಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಜೋಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು.

ಮೂಲತಃ ಯಾದಗಿರಿ ಜಿಲ್ಲೆಯ ಸುರಪುರದವರಾಗಿದ್ದ ದಂಪತಿ ಬೆಂಗಳೂರಿನಲ್ಲಿ ಕರಿಹೋಬನಹಳ್ಳಿಯ ಬೃಂದಾವನ ನಗರದ ಕಚೇರಿಯಲ್ಲಿ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದರು. ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಅದೇ ಕಚೇರಿಯ ಕೆ.ಎ.ಎಸ್. ಅಧಿಕಾರಿಯ ಚೇಂಬರ್ ನ ವಾಷ್ ರೂಂನಲ್ಲಿ ಎಸೆಯಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೀಣ್ಯ ಪೊಲೀಸರು, ಹನುಮಂತರಾಯ ಮತ್ತು ಹೊನ್ನಮ್ಮ ದಂಪತಿಯ ಎರಡನೇ ಪುತ್ರನನ್ನು ಬಂಧಿಸಿದ್ದು ಪ್ರಕರಣದ ನೈಜಾಂಶವನ್ನು ಹೊರಗೆಳೆದಿದ್ದಾರೆ. ಗಾಂಜಾ ದಾಸನಾಗಿದ್ದ ಹುಡುಗ ಜ್ಯೋತಿಷಿಯನ್ನು ಭೇಟಿ ಮಾಡಿ ಶಾಸ್ತ್ರ ಕೇಳಿದ್ದ. ನೀನು ಚೆನ್ನಾಗಿ ಇರಬೇಕಾದರೆ ನಿಮ್ಮ ತಂದೆ ಸಾಯಬೇಕು. ನಿನಗೆ ಪಿತೃದೋಷವಿದೆ ಎಂದು ಜ್ಯೋತಿಷಿ ಹೇಳಿದ್ದ. ಇದನ್ನೇ ನಂಬಿದ್ದ ಹದಿನಾಲ್ಕು ವರ್ಷದ ಪುತ್ರ ತಂದೆಯನ್ನು ಕೊಲೆ ಮಾಡಲು ಹೋಗಿ ಅಡ್ಡಬಂದ ತಾಯಿಯನ್ನೂ ಕೊಲೆಗೈದಿದ್ದಾನೆ.
In a shocking incident reported in Bangalore Acting on an astrologer's advice, a 14-year-old boy kills his parents.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm