ಬ್ರೇಕಿಂಗ್ ನ್ಯೂಸ್
08-05-21 02:11 pm Bangalore Correspondent ಕ್ರೈಂ
ಬೆಂಗಳೂರು, ಮೇ 8 : ಜ್ಯೋತಿಷಿ ಮಾತು ಕೇಳಿದ 14ರ ಹರೆಯದ ಬಾಲಕ ಹೆತ್ತ ತಂದೆ, ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆಗೈದ ಪ್ರಕರಣ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಿನಗೆ ಪಿತೃದೋಷವಿದೆ. ನಿನ್ನ ತಂದೆ ಸತ್ತರೆ ಮಾತ್ರ ನಿನಗೆ ಒಳ್ಳೆದಾಗುತ್ತೆ... ಎಂಬ ಜ್ಯೋತಿಷಿಯ ಮಾತು ಕೇಳಿದ ಪುತ್ರ ಗಾಂಜಾ ಮತ್ತಿನಲ್ಲಿ ಜನ್ಮ ಕೊಟ್ಟ ತಂದೆ ತಾಯಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.

ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಹನುಮಂತರಾಯ (45) ಮತ್ತು ಹೊನ್ಮಮ್ಮ (34) ದಂಪತಿಯ ಶವ ಎರಡು ದಿನಗಳ ಹಿಂದೆ ಪತ್ತೆಯಾಗಿತ್ತು. ಕಚೇರಿ ಬಾತ್ ರೂಮ್ ನಲ್ಲಿ ಬಿದ್ದಿದ್ದ ದಂಪತಿಯನ್ನು ಯಾರೋ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದು ಕಂಡುಬಂದಿತ್ತು. ಪೀಣ್ಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಜೋಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು.

ಮೂಲತಃ ಯಾದಗಿರಿ ಜಿಲ್ಲೆಯ ಸುರಪುರದವರಾಗಿದ್ದ ದಂಪತಿ ಬೆಂಗಳೂರಿನಲ್ಲಿ ಕರಿಹೋಬನಹಳ್ಳಿಯ ಬೃಂದಾವನ ನಗರದ ಕಚೇರಿಯಲ್ಲಿ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದರು. ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಅದೇ ಕಚೇರಿಯ ಕೆ.ಎ.ಎಸ್. ಅಧಿಕಾರಿಯ ಚೇಂಬರ್ ನ ವಾಷ್ ರೂಂನಲ್ಲಿ ಎಸೆಯಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೀಣ್ಯ ಪೊಲೀಸರು, ಹನುಮಂತರಾಯ ಮತ್ತು ಹೊನ್ನಮ್ಮ ದಂಪತಿಯ ಎರಡನೇ ಪುತ್ರನನ್ನು ಬಂಧಿಸಿದ್ದು ಪ್ರಕರಣದ ನೈಜಾಂಶವನ್ನು ಹೊರಗೆಳೆದಿದ್ದಾರೆ. ಗಾಂಜಾ ದಾಸನಾಗಿದ್ದ ಹುಡುಗ ಜ್ಯೋತಿಷಿಯನ್ನು ಭೇಟಿ ಮಾಡಿ ಶಾಸ್ತ್ರ ಕೇಳಿದ್ದ. ನೀನು ಚೆನ್ನಾಗಿ ಇರಬೇಕಾದರೆ ನಿಮ್ಮ ತಂದೆ ಸಾಯಬೇಕು. ನಿನಗೆ ಪಿತೃದೋಷವಿದೆ ಎಂದು ಜ್ಯೋತಿಷಿ ಹೇಳಿದ್ದ. ಇದನ್ನೇ ನಂಬಿದ್ದ ಹದಿನಾಲ್ಕು ವರ್ಷದ ಪುತ್ರ ತಂದೆಯನ್ನು ಕೊಲೆ ಮಾಡಲು ಹೋಗಿ ಅಡ್ಡಬಂದ ತಾಯಿಯನ್ನೂ ಕೊಲೆಗೈದಿದ್ದಾನೆ.
In a shocking incident reported in Bangalore Acting on an astrologer's advice, a 14-year-old boy kills his parents.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm