ಬ್ರೇಕಿಂಗ್ ನ್ಯೂಸ್
27-08-20 11:45 am Hassan Reporter ಕ್ರೈಂ
ಹಾಸನ, ಆಗಸ್ಟ್ 27: ನಿರ್ಗತಿಕ ಮಹಿಳೆಯೊಬ್ಬಳನ್ನು ಕೊಂದು ನಂತರ ತನ್ನ ಕಾಮತೃಷೆ ತೀರಿಸಿಕೊಂಡ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು ಗಂಭೀರವಾಗಿ ಪರಿಗಣಿಸಿರುವ ಹಾಸನ ಜಿಲ್ಲಾ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಸೋಮವಾರ ತಡರಾತ್ರಿ ಮಹಿಳೆ ಭಿಕ್ಷಾಟನೆಯ ಬಳಿಕ ರಾತ್ರಿ 11 ಗಂಟೆ ವೇಳೆಗೆ ಎನ್.ಆರ್. ವೃತ್ತದ ಕನ್ನಿಕಾ ಪರಮೇಶ್ವರಿ ಬ್ಯಾಂಕ್ ಎದುರು ಮಲಗಲು ಅಣಿಯಾಗುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದಿದ್ದ ನೀಲಿ ಜೀನ್ಸ್ ಪ್ಯಾಂಟ್ ಧಾರಿ ಕೀಚಕ, ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಲವಂತ ಮಾಡುತ್ತಾನೆ. ಇದಕ್ಕೆ ಮಹಿಳೆ ನಿರಾಕರಿಸಿದಾಗ ಅಲ್ಲಿಂದ ತೆರಳುವ ಪಾಪಿ ಯುವಕ, ಮಹಿಳೆ ನಿದ್ದೆಗೆ ಜಾರುವವರೆಗೂ ಬೇರೆಡೆ ಹೊಂಚು ಹಾಕಿದ್ದಾನೆ. ಮಹಿಳೆ ಮಲಗಿದ್ದನ್ನು ಖಾತ್ರಿ ಪಡಿಸಿಕೊಂಡ ದುರುಳ, ಬೃಹತ್ ಗಾತ್ರದ ಹಾಲೋಬ್ರಿಕ್ಸ್ ಇಟ್ಟಿಗೆಯನ್ನು ಮಲಗಿದ್ದ ಮಹಿಳೆಯ ತಲೆಗೆ ಎತ್ತಿ ಹಾಕುತ್ತಾನೆ. ನಂತರ ಆಕೆ ಸತ್ತಳೆಂದು ದೃಢವಾದ ಬಳಿಕ ಸತ್ತ ಹೆಣದ ಜೊತೆ ಮೃಗೀಯ ರೀತಿ ವರ್ತಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಾನೆ. ಈ ಎಲ್ಲಾ ಅಮಾನವೀಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ವಿಕೃತ ಕಾಮಿ ಉಮೇಶ್ ರೆಡ್ಡಿಯ ಹೀನ ಕೃತ್ಯವನ್ನು ನೆನಪಿಸುವ ರೀತಿಯ ಹಂತಕನ ಕರಾಳ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಇಡೀ ಮನುಕುಲವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಅಲ್ಲದೆ ಸಾರ್ವಜನಿಕ ವಲಯದಲ್ಲಿ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಆತನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಕೃತ್ಯದ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಸಿಸಿಟಿವಿ ಆಧರಿಸಿ ಆರೋಪಿ ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಇದಕ್ಕಾಗಿ ವಿಶೇಷ ತಂಡ ರಚನೆ ಮಾಡಿದ್ದು, ಆದಷ್ಟು ಬೇಗ ಆರೋಪಿಯನ್ನು ಬಂಧಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹಾಸನ ಎಸ್ಪಿ ಶ್ರೀನಿವಾಸ್ ಗೌಡ ಭರವಸೆ ನೀಡಿದ್ದಾರೆ.
16-04-25 09:07 pm
Bangalore Correspondent
Bigg Boss Kannada, Rajath arrested: ರೀಲ್ಸ್ ಶೋ...
16-04-25 06:42 pm
CM Siddaramaiah, Lokayukta, Muda: ಸಿಎಂ ಸಿದ್ದರ...
15-04-25 08:44 pm
Kannada Journalist S K Shyamsundar Death: ಹಿರ...
15-04-25 12:51 pm
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
16-04-25 03:54 pm
HK News Desk
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
16-04-25 08:22 pm
Mangalore Correspondent
Asif Apatbandava, Rauf Bengre Honey Trap, Man...
16-04-25 02:02 pm
Panambur Bike Accident, Mangalore: ಪಣಂಬೂರಿನಲ್...
16-04-25 01:29 pm
NIA, Praveen Nettaru: ಪ್ರವೀಣ್ ನೆಟ್ಟಾರು ಕೊಲೆ ಪ...
15-04-25 09:57 pm
Drowning, Surathkal Beach, Mangalore, News: ಮ...
15-04-25 09:21 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm