ಬ್ರೇಕಿಂಗ್ ನ್ಯೂಸ್
27-08-20 12:26 pm Bangalore Reporter ಕ್ರೈಂ
ಬೆಂಗಳೂರು, ಆಗಸ್ಟ್ 27: ಸಿಲಿಕಾನ್ ಸಿಟಿಯ ಸಿಸಿಬಿ ಪೊಲೀಸರು ಮೊಟ್ಟಮೊದಲ ಬಾರಿಗೆ ಎರಡು ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದಾರೆ. ಏಕಕಾಲದಲ್ಲಿ 204 ಕೆಜಿ ಗಾಂಜಾ ಸಿಸಿಬಿ ಪೊಲೀಸರು ಬೇಟೆಯಾಡಿದ್ದು, ಈ ಮೂಲಕ ಇದೇ ಮೊದಲ ಬಾರಿಗೆ ಪೊಲೀಸ್ ಇತಿಹಾಸದಲ್ಲೇ ಇಷ್ಟು ಪ್ರಮಾಣದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಗಾಂಜಾ ಬರೋಬ್ಬರಿ ಒಂದು ಕೋಟಿ ಬೆಲೆಬಾಳುತ್ತದೆ ಎಂದು ಅಂದಾಜಿಸಲಾಗಿದೆ.


ಜೊತೆಗೆ ಈ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಸಮೀರ್, ಕೈಸರ್ ಪಾಷಾ, ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಒಂದು ಲಾರಿ, ಒಂದು ಕಾರು, ಮೂರು ಮೊಬೈಲ್ ಸೇರಿದಂತೆ 204 ಕೆಜಿ ಗಾಂಜಾ ವಶ ಪಡೆಯಲಾಗಿದೆ. ಈ ಗ್ಯಾಂಗ್ ಸದಸ್ಯರು ರಾಜಾರೋಷವಾಗಿ ಲಾರಿಯಲ್ಲೇ ಗಾಂಜಾ ಸಾಗಾಟ ಮಾಡುತ್ತಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ಪಡೆದ ಇನ್ಸ್ಪೆಕ್ಟರ್ ಬೊಳೆತ್ತಿನ್ ಹಾಗೂ ವಿರುಪಾಕ್ಷ ನೇತೃತ್ವದ ತಂಡ ದಾಳಿ ಮಾಡಿ ಅರೆಸ್ಟ್ ಮಾಡಿದೆ.
ಗಾಂಜಾ ಸಾಗಾಟದಲ್ಲಿ ರಾಜಕಾರಣಿಗಳ ಹೆಸರು ತಳುಕು ಹಾಕಿಕೊಂಡಿದ್ದು, ಬಂಧಿಸಿರುವ ಮೂವರಲ್ಲಿ ಕೈಸರ್ ಪಾಷಾ ಮೈಸೂರಿನ ಜೆಡಿಎಸ್ ಪಕ್ಷದ ಮುಖಂಡನಾಗಿದ್ದಾನೆ. ಈತನೇ ಈ ಗಾಂಜಾ ಗ್ಯಾಂಗಿನ ಕಿಂಗ್ಪಿನ್ ಎನ್ನಲಾಗಿದ್ದು, ಈತ ಮೈಸೂರಿನ ಶಾಂತಿನಗರ ನಗರಸಭೆ ವಾರ್ಡಿನಿಂದ ಕೌನ್ಸಲರ್ ಚುನಾವಣೆ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದ. ಆದರೆ ಕೇವಲ 150 ಮತಗಳಿಂದ ಪರಾಜಿತ ಹೊಂದಿದ್ದ. ಈತ ಲಾರಿಯಲ್ಲಿ ಗಾಂಜಾವನ್ನು ವಿಶಾಖಪಟ್ಟಣದಿಂದ ದೇವನಹಳ್ಳಿಗೆ ಸಾಗಿಸುವಾಗ ಸಿಕ್ಕಿಬಿದ್ದಿದ್ದಾನೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm