ಬ್ರೇಕಿಂಗ್ ನ್ಯೂಸ್
27-08-20 12:26 pm Bangalore Reporter ಕ್ರೈಂ
ಬೆಂಗಳೂರು, ಆಗಸ್ಟ್ 27: ಸಿಲಿಕಾನ್ ಸಿಟಿಯ ಸಿಸಿಬಿ ಪೊಲೀಸರು ಮೊಟ್ಟಮೊದಲ ಬಾರಿಗೆ ಎರಡು ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದಾರೆ. ಏಕಕಾಲದಲ್ಲಿ 204 ಕೆಜಿ ಗಾಂಜಾ ಸಿಸಿಬಿ ಪೊಲೀಸರು ಬೇಟೆಯಾಡಿದ್ದು, ಈ ಮೂಲಕ ಇದೇ ಮೊದಲ ಬಾರಿಗೆ ಪೊಲೀಸ್ ಇತಿಹಾಸದಲ್ಲೇ ಇಷ್ಟು ಪ್ರಮಾಣದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಗಾಂಜಾ ಬರೋಬ್ಬರಿ ಒಂದು ಕೋಟಿ ಬೆಲೆಬಾಳುತ್ತದೆ ಎಂದು ಅಂದಾಜಿಸಲಾಗಿದೆ.


ಜೊತೆಗೆ ಈ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಸಮೀರ್, ಕೈಸರ್ ಪಾಷಾ, ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಒಂದು ಲಾರಿ, ಒಂದು ಕಾರು, ಮೂರು ಮೊಬೈಲ್ ಸೇರಿದಂತೆ 204 ಕೆಜಿ ಗಾಂಜಾ ವಶ ಪಡೆಯಲಾಗಿದೆ. ಈ ಗ್ಯಾಂಗ್ ಸದಸ್ಯರು ರಾಜಾರೋಷವಾಗಿ ಲಾರಿಯಲ್ಲೇ ಗಾಂಜಾ ಸಾಗಾಟ ಮಾಡುತ್ತಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ಪಡೆದ ಇನ್ಸ್ಪೆಕ್ಟರ್ ಬೊಳೆತ್ತಿನ್ ಹಾಗೂ ವಿರುಪಾಕ್ಷ ನೇತೃತ್ವದ ತಂಡ ದಾಳಿ ಮಾಡಿ ಅರೆಸ್ಟ್ ಮಾಡಿದೆ.
ಗಾಂಜಾ ಸಾಗಾಟದಲ್ಲಿ ರಾಜಕಾರಣಿಗಳ ಹೆಸರು ತಳುಕು ಹಾಕಿಕೊಂಡಿದ್ದು, ಬಂಧಿಸಿರುವ ಮೂವರಲ್ಲಿ ಕೈಸರ್ ಪಾಷಾ ಮೈಸೂರಿನ ಜೆಡಿಎಸ್ ಪಕ್ಷದ ಮುಖಂಡನಾಗಿದ್ದಾನೆ. ಈತನೇ ಈ ಗಾಂಜಾ ಗ್ಯಾಂಗಿನ ಕಿಂಗ್ಪಿನ್ ಎನ್ನಲಾಗಿದ್ದು, ಈತ ಮೈಸೂರಿನ ಶಾಂತಿನಗರ ನಗರಸಭೆ ವಾರ್ಡಿನಿಂದ ಕೌನ್ಸಲರ್ ಚುನಾವಣೆ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದ. ಆದರೆ ಕೇವಲ 150 ಮತಗಳಿಂದ ಪರಾಜಿತ ಹೊಂದಿದ್ದ. ಈತ ಲಾರಿಯಲ್ಲಿ ಗಾಂಜಾವನ್ನು ವಿಶಾಖಪಟ್ಟಣದಿಂದ ದೇವನಹಳ್ಳಿಗೆ ಸಾಗಿಸುವಾಗ ಸಿಕ್ಕಿಬಿದ್ದಿದ್ದಾನೆ.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 01:51 pm
HK News Staffer
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm