ಬ್ರೇಕಿಂಗ್ ನ್ಯೂಸ್
27-08-20 06:04 pm Mangalore Reporter ಕ್ರೈಂ
ಮಂಗಳೂರು, ಆಗಸ್ಟ್ 27: ಭ್ರಷ್ಟಾಚಾರ ಮಾಡಿದ್ರೂ ಹೇಗೂ ಬಚಾವ್ ಆಗಬಹುದು ಎಂಬ ಹುಂಬತನ ಎಲ್ಲ ಕಾಲದಲ್ಲೂ ನಡೆಯಲ್ಲ. ಹತ್ತು ವರ್ಷಗಳ ಹಿಂದೆ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಗೆ ಲೋಕಾಯುಕ್ತ ನ್ಯಾಯಾಲಯ ಶಿಕ್ಷೆ ಘೋಷಿಸಿದ್ದು ಹುದ್ದೆಯಲ್ಲಿ ಇರುವಾಗಲೇ ಬಂಧನಕ್ಕೊಳಗಾಗಿದ್ದಾನೆ.
ಮಂಗಳೂರಿನ ಕರಾವಳಿ ಕಾವಲು ಪಡೆಯ ಇನ್ಸ್ ಪೆಕ್ಟರ್ ಆಗಿರುವ ಗಂಗೀರೆಡ್ಡಿ ಬಂಧನಕ್ಕೊಳಗಾಗಿರುವ ಅಧಿಕಾರಿ. 2009ರ ಆಗಸ್ಟ್ 27ರಂದು ಬೆಳ್ತಂಗಡಿ ಪೊಲೀಸ್ ಇನ್ಸ್ ಪೆಕ್ಟರ್ ಆಗಿದ್ದ ವೇಳೆ ಗಂಗೀರೆಡ್ಡಿಯ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಆಗಿನ ಲೋಕಾಯುಕ್ತ ಡಿವೈಎಸ್ಪಿ ಸದಾನಂದ ವೆರ್ಣೇಕರ್ ನೇತೃತ್ವದ ತಂಡ ದಾಳಿ ನಡೆಸಿ, ಸುಮಾರು 19 ಲಕ್ಷಕ್ಕಿಂತಲೂ ಹೆಚ್ಚು ಮೌಲ್ಯದ ಆಸ್ತಿ ಪತ್ತೆಯಾದ ಬಗ್ಗೆ ಕೇಸು ದಾಖಲಿಸಿತ್ತು. ಆಬಳಿಕ ತನಿಖೆ ಪೂರ್ಣಗೊಳಿಸಿದ್ದ ಲೋಕಾಯುಕ್ತ ಡಿವೈಎಸ್ಪಿ ಎಂ. ವಿಠಲದಾಸ್ ಪೈ ಆರೋಪಿ ಗಂಗೀರೆಡ್ಡಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಮಂಗಳೂರಿನ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. 22 ಸಾಕ್ಷಿದಾರರ ಹೇಳಿಕೆ ದಾಖಲಿಸಿ, ವಿಚಾರಣೆಗೆ ಪರಿಗಣಿಸಲಾಗಿತ್ತು. ವಿಶೇಷ ಸರಕಾರಿ ಅಭಿಯೋಜಕರಾದ ಕೆ.ಎಸ್.ಎನ್ ರಾಜೇಶ್ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಆರೋಪಿ ಗಂಗೀರೆಡ್ಡಿ ಮೇಲಿನ ಆರೋಪ ಸಾಬೀತಾಗಿರುವ ಬಗ್ಗೆ ತೀರ್ಮಾನಕ್ಕೆ ಬಂದಿದ್ದು ಇಂದು ಶಿಕ್ಷೆಯನ್ನು ಘೋಷಣೆ ಮಾಡಿದೆ.
ನ್ಯಾಯಾಧೀಶ ಬಿ.ಬಿ.ಜಕಾತಿ 111 ಪುಟಗಳ ಸುದೀರ್ಘ ತೀರ್ಪು ಘೋಷಣೆ ಮಾಡಿದ್ದು ಆರೋಪಿ ಗಂಗೀರೆಡ್ಡಿ ವಿರುದ್ಧ ನಾಲ್ಕು ವರ್ಷ ಸಾದಾ ಸಜೆ ಮತ್ತು 5 ಲಕ್ಷ ರೂಪಾಯಿ ದಂಡವನ್ನು ಶಿಕ್ಷೆಯಾಗಿ ಘೋಷಿಸಿದ್ದಾರೆ. ಅಲ್ಲದೆ, ದಂಡ ತೆರಲು ತಪ್ಪಿದಲ್ಲಿ ಮತ್ತೊಂದು ವರ್ಷ ಶಿಕ್ಷೆಗೆ ಒಳಪಡಬೇಕೆಂದು ತೀರ್ಪಿನಲ್ಲಿ ಹೇಳಿದ್ದಾರೆ.
ಪ್ರಸ್ತುತ ಮಂಗಳೂರಿನ ಪಣಂಬೂರಿನಲ್ಲಿರುವ ಕರಾವಳಿ ಕಾವಲು ಪಡೆಯಲ್ಲಿ ಇನ್ಸ್ ಪೆಕ್ಟರ್ ಆಗಿರುವ ಗಂಗೀರೆಡ್ಡಿಯನ್ನು ಪೊಲೀಸರು ಬಂಧಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಳ್ಳರನ್ನು ಹಿಡಿದು ಜೈಲಿಗೆ ತಳ್ಳುವ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ಕರ್ತವ್ಯದಲ್ಲಿರುವಾಗಲೇ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಕ್ಕಿಬಿದ್ದು ಜೈಲು ಪಾಲಾಗುತ್ತಿರುವುದು ಕರಾವಳಿಯ ಮಟ್ಟಿಗೆ ಹೊಸ ಇತಿಹಾಸ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm