ಬ್ರೇಕಿಂಗ್ ನ್ಯೂಸ್
16-05-21 05:25 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಮೇ 16: ವಿವಾಹಿತ ಮಾನಸಿಕ ಅಸ್ವಸ್ಥೆಯೋರ್ವರ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿರುವ ಪ್ರಕರಣ 34ನೇ ನೆಕ್ಕಿಲಾಡಿಯಲ್ಲಿ ನಡೆದಿದ್ದು, ಈ ಬಗ್ಗೆ ಆಕೆಯ ತಾಯಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ದರ್ಬೆ ನಿವಾಸಿ ಸುರೇಶ್ ಪ್ರಭು ಆರೋಪಿ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಮಾನಸಿಕ ಅಸ್ವಸ್ಥೆ ಹಾಗು ಆಕೆಯ ತಾಯಿ ಮೂಲತಃ ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾಗಿದ್ದು, ನೆಕ್ಕಿಲಾಡಿಯ ಬಳಿ ಬಾಡಿಗೆ ಮನೆಯಲ್ಲಿ ಕಳೆದ ಒಂದು ವರ್ಷದಿಂದ ವಾಸ್ತವ್ಯವಿದ್ದರು. ಇವರ 44ರ ಹರೆಯದ ಮಗಳು ಮಾನಸಿಕ ಅಸ್ವಸ್ಥೆಯಾಗಿದ್ದು, ಅವರ ಪತಿ ಗುಜರಾತ್ನಲ್ಲಿದ್ದಾರೆ. ಕಳೆದ 10 ತಿಂಗಳ ಹಿಂದೆ ಪತಿ ಗುಜರಾತ್ಗೆ ತೆರಳಿದ್ದರು.
ಕಳೆದ ಮೇ 12ರಂದು ಇವರ ಮನೆಗೆ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಭೇಟಿ ನೀಡಿದ್ದು, ಈ ಸಂದರ್ಭ ಸಂಶಯ ಬಂದು ಮಹಿಳೆಯನ್ನು ಸ್ಕ್ಯಾನಿಂಗ್ ಮಾಡಿಸಲು ತಿಳಿಸಿದಾಗ ಈಕೆ ಏಳು ತಿಂಗಳ ಗರ್ಭಿಣಿಯೆಂದು ದೃಢವಾಗಿದೆ. ಬಳಿಕ ಈಕೆಯ ತಾಯಿ ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ತನ್ನ ಮಗಳ ಮೇಲೆ ದರ್ಬೆಯ ಸುರೇಶ್ ಪ್ರಭು ಎಂಬಾತ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿದ್ದಾನೆ ಎಂದು ದೂರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
A mentally challenged woman has been allegedly raped and made pregnant by a man in Uppinangady, Mangalore, A case has been filed and the search is on for the accused Suresh Prabhu.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm