ಬ್ರೇಕಿಂಗ್ ನ್ಯೂಸ್
16-05-21 05:25 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಮೇ 16: ವಿವಾಹಿತ ಮಾನಸಿಕ ಅಸ್ವಸ್ಥೆಯೋರ್ವರ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿರುವ ಪ್ರಕರಣ 34ನೇ ನೆಕ್ಕಿಲಾಡಿಯಲ್ಲಿ ನಡೆದಿದ್ದು, ಈ ಬಗ್ಗೆ ಆಕೆಯ ತಾಯಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ದರ್ಬೆ ನಿವಾಸಿ ಸುರೇಶ್ ಪ್ರಭು ಆರೋಪಿ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಮಾನಸಿಕ ಅಸ್ವಸ್ಥೆ ಹಾಗು ಆಕೆಯ ತಾಯಿ ಮೂಲತಃ ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾಗಿದ್ದು, ನೆಕ್ಕಿಲಾಡಿಯ ಬಳಿ ಬಾಡಿಗೆ ಮನೆಯಲ್ಲಿ ಕಳೆದ ಒಂದು ವರ್ಷದಿಂದ ವಾಸ್ತವ್ಯವಿದ್ದರು. ಇವರ 44ರ ಹರೆಯದ ಮಗಳು ಮಾನಸಿಕ ಅಸ್ವಸ್ಥೆಯಾಗಿದ್ದು, ಅವರ ಪತಿ ಗುಜರಾತ್ನಲ್ಲಿದ್ದಾರೆ. ಕಳೆದ 10 ತಿಂಗಳ ಹಿಂದೆ ಪತಿ ಗುಜರಾತ್ಗೆ ತೆರಳಿದ್ದರು.
ಕಳೆದ ಮೇ 12ರಂದು ಇವರ ಮನೆಗೆ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಭೇಟಿ ನೀಡಿದ್ದು, ಈ ಸಂದರ್ಭ ಸಂಶಯ ಬಂದು ಮಹಿಳೆಯನ್ನು ಸ್ಕ್ಯಾನಿಂಗ್ ಮಾಡಿಸಲು ತಿಳಿಸಿದಾಗ ಈಕೆ ಏಳು ತಿಂಗಳ ಗರ್ಭಿಣಿಯೆಂದು ದೃಢವಾಗಿದೆ. ಬಳಿಕ ಈಕೆಯ ತಾಯಿ ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ತನ್ನ ಮಗಳ ಮೇಲೆ ದರ್ಬೆಯ ಸುರೇಶ್ ಪ್ರಭು ಎಂಬಾತ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿದ್ದಾನೆ ಎಂದು ದೂರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
A mentally challenged woman has been allegedly raped and made pregnant by a man in Uppinangady, Mangalore, A case has been filed and the search is on for the accused Suresh Prabhu.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 06:54 pm
Mangalore Correspondent
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm