ಬ್ರೇಕಿಂಗ್ ನ್ಯೂಸ್
21-05-21 11:10 am Udupi Correspondent ಕ್ರೈಂ
Photo credits : Representative Image
ಕಾರ್ಕಳ, ಮೇ 21: ವ್ಯಕ್ತಿಯೊಬ್ಬರು ತನ್ನ ಮನೆಯ ವೆರಾಂಡಾದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಎರಡು ದಿನಗಳ ಬಳಿಕ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಕಾರ್ಕಳದ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರ್ಲಾಲು ಹಾದಿಯಂಗಡಿ ನಿವಾಸಿ ಆನಂದ್ ಶೇರ್ವೆಗಾರ್ (63) ಮೃತ ವ್ಯಕ್ತಿಯಾಗಿದ್ದು, ಮೇ 19ರಂದು ರಾತ್ರಿ ಕೊಲೆಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆನಂದ್ ಶೇರ್ವೆಗಾರ್ ತನ್ನ ಮಕ್ಕಳು ಮತ್ತು ಪತ್ನಿಯಿಂದ ಬೇರೆಯಾಗಿದ್ದು, ತನಗೆ ಸೇರಿದಗದ ನಾಲ್ಕು ಎಕ್ರೆ ಜಾಗವನ್ನು ಬೆಂಗಳೂರಿನಲ್ಲಿರುವ ಗಣೇಶ್ ರಾವ್ ಮತ್ತು ಮೂವರಿಗೆ ಮಾರಾಟ ಮಾಡಿದ್ದಾರೆ.
ಹಾಗಿದ್ದರೂ, ಜಾಗ ಖರೀದಿಸಿದ ವ್ಯಕ್ತಿಗಳ ಅನುಮತಿ ಪಡೆದು ಅದೇ ಜಾಗದ ಮೂಲೆಯಲ್ಲಿ ಅವರ ಸಂಬಂಧಿಕರ ಮನೆಯ ಪಕ್ಕದಲ್ಲಿ ಸಣ್ಣ ಮನೆ ಮಾಡಿಕೊಂಡು ಒಬ್ಬಂಟಿಯಾಗಿ ನೆಲೆಸಿದ್ದರು. ಒಬ್ಬಂಟಿಯಾಗಿದ್ದ ಆನಂದ್ ಅವರಿಗೆ ದೀನಸಿ ಸಾಮಗ್ರಿ ತಂದುಕೊಡುವುದು ಮತ್ತು ಇತರ ಕೆಲಸಗಳನ್ನು ಮಾಡಿಕೊಡುವುದಕ್ಕಾಗಿ ಅವರ ಅಕ್ಕನ ಮಗ ಹರೀಶ್ ಎಂಬಾತ ಬರುತ್ತಿದ್ದ. ಕೆಲವೊಮ್ಮೆ ಇಬ್ಬರೂ ಮನೆಯಲ್ಲಿ ಕುಳಿತು ಕುಡಿಯುವ ಚಟವನ್ನೂ ಬೆಳೆಸಿಕೊಂಡಿದ್ದರು ಎನ್ನಲಾಗಿದೆ.
ಮೊನ್ನೆ ರಾತ್ರಿಯೂ ಹರೀಶ್ ಮನೆಗೆ ಬಂದಿದ್ದು, ಸಂಜೆ ಹೊತ್ತಿಗೆ ಕೆಲಸ ಮುಗಿಸಿ ತೆರಳಿದ್ದ. ರಾತ್ರಿ ವೇಳೆಗೆ ಮತ್ತೆ ಬಂದಿದ್ದು, ಈ ಸಂದರ್ಭದಲ್ಲಿ ಏನೋ ಜಗಳ ಆಗಿರಬೇಕೆಂದು ಸ್ಥಳೀಯರು ಸಂಶಯಿಸಿದ್ದಾರೆ. ಇದರ ಪರಿಣಾಮ ಕೊಲೆ ಆಗಿದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The mortal remains of Shirlalu Hadiangadi Anand Shervegar (63) were found on the verandah of the house, where he used to reside alone, on the late-night of May 19. It is suspected that he is murdered.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am