ಬ್ರೇಕಿಂಗ್ ನ್ಯೂಸ್
21-05-21 11:10 am Udupi Correspondent ಕ್ರೈಂ
Photo credits : Representative Image
ಕಾರ್ಕಳ, ಮೇ 21: ವ್ಯಕ್ತಿಯೊಬ್ಬರು ತನ್ನ ಮನೆಯ ವೆರಾಂಡಾದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಎರಡು ದಿನಗಳ ಬಳಿಕ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಕಾರ್ಕಳದ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರ್ಲಾಲು ಹಾದಿಯಂಗಡಿ ನಿವಾಸಿ ಆನಂದ್ ಶೇರ್ವೆಗಾರ್ (63) ಮೃತ ವ್ಯಕ್ತಿಯಾಗಿದ್ದು, ಮೇ 19ರಂದು ರಾತ್ರಿ ಕೊಲೆಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆನಂದ್ ಶೇರ್ವೆಗಾರ್ ತನ್ನ ಮಕ್ಕಳು ಮತ್ತು ಪತ್ನಿಯಿಂದ ಬೇರೆಯಾಗಿದ್ದು, ತನಗೆ ಸೇರಿದಗದ ನಾಲ್ಕು ಎಕ್ರೆ ಜಾಗವನ್ನು ಬೆಂಗಳೂರಿನಲ್ಲಿರುವ ಗಣೇಶ್ ರಾವ್ ಮತ್ತು ಮೂವರಿಗೆ ಮಾರಾಟ ಮಾಡಿದ್ದಾರೆ.
ಹಾಗಿದ್ದರೂ, ಜಾಗ ಖರೀದಿಸಿದ ವ್ಯಕ್ತಿಗಳ ಅನುಮತಿ ಪಡೆದು ಅದೇ ಜಾಗದ ಮೂಲೆಯಲ್ಲಿ ಅವರ ಸಂಬಂಧಿಕರ ಮನೆಯ ಪಕ್ಕದಲ್ಲಿ ಸಣ್ಣ ಮನೆ ಮಾಡಿಕೊಂಡು ಒಬ್ಬಂಟಿಯಾಗಿ ನೆಲೆಸಿದ್ದರು. ಒಬ್ಬಂಟಿಯಾಗಿದ್ದ ಆನಂದ್ ಅವರಿಗೆ ದೀನಸಿ ಸಾಮಗ್ರಿ ತಂದುಕೊಡುವುದು ಮತ್ತು ಇತರ ಕೆಲಸಗಳನ್ನು ಮಾಡಿಕೊಡುವುದಕ್ಕಾಗಿ ಅವರ ಅಕ್ಕನ ಮಗ ಹರೀಶ್ ಎಂಬಾತ ಬರುತ್ತಿದ್ದ. ಕೆಲವೊಮ್ಮೆ ಇಬ್ಬರೂ ಮನೆಯಲ್ಲಿ ಕುಳಿತು ಕುಡಿಯುವ ಚಟವನ್ನೂ ಬೆಳೆಸಿಕೊಂಡಿದ್ದರು ಎನ್ನಲಾಗಿದೆ.
ಮೊನ್ನೆ ರಾತ್ರಿಯೂ ಹರೀಶ್ ಮನೆಗೆ ಬಂದಿದ್ದು, ಸಂಜೆ ಹೊತ್ತಿಗೆ ಕೆಲಸ ಮುಗಿಸಿ ತೆರಳಿದ್ದ. ರಾತ್ರಿ ವೇಳೆಗೆ ಮತ್ತೆ ಬಂದಿದ್ದು, ಈ ಸಂದರ್ಭದಲ್ಲಿ ಏನೋ ಜಗಳ ಆಗಿರಬೇಕೆಂದು ಸ್ಥಳೀಯರು ಸಂಶಯಿಸಿದ್ದಾರೆ. ಇದರ ಪರಿಣಾಮ ಕೊಲೆ ಆಗಿದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The mortal remains of Shirlalu Hadiangadi Anand Shervegar (63) were found on the verandah of the house, where he used to reside alone, on the late-night of May 19. It is suspected that he is murdered.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 07:53 pm
HK News Staffer
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm