ಬ್ರೇಕಿಂಗ್ ನ್ಯೂಸ್
28-08-20 02:37 pm Headline Karnataka News Network ಕ್ರೈಂ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 'ಜಮೀನು ಖರೀದಿ' ಯೋಜನೆ ಅವ್ಯವಹಾರ ಆರೋಪ ಸಂಬಂಧ ತನಿಖೆ ಮುಂದುವರಿಸಿರುವ ಎಸಿಬಿ, ಮೂವರನ್ನು ಬಂಧಿಸಿ ಒಟ್ಟು 82 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ.
ಇಲ್ಲಿನ ವಸಂತ ನಗರದಲ್ಲಿರುವ ನಿಗಮದ ಕಚೇರಿಗೆ ಗುರುವಾರ ಸಂಜೆ ವೇಳೆ ಹಣ ಬರುವ ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು, ಶುಕ್ರವಾರವೂ ಶೋಧ ಕಾರ್ಯ ಮುಂದುವರಿಸಿದ್ದರು.
ಈ ಪ್ರಕರಣ ಸಂಬಂಧ ಮಂಡಳಿಯ ಪ್ರಧಾನ ವ್ಯವಸ್ಥಾಪಕ ನಾಗೇಶ್, ವ್ಯವಸ್ಥಾಪಕ ಸುಬ್ಬಯ್ಯ, ಸಹಾಯಕ ಪ್ರಧಾನ ವ್ಯವಸ್ಥಾಪಕಿ ಮಂಜುಳಾ ಎಂಬವರನ್ನು ಬಂಧಿಸಲಾಗಿದೆ ಎಂದು ಎಸಿಬಿ ತಿಳಿಸಿದೆ.
ಆರೋಪಿ ನಾಗೇಶ್ ನಿವಾಸದ ಮೇಲೆ ದಾಳಿ ನಡೆಸಿದಾಗ 32.5 ಲಕ್ಷ ರೂ.ಪತ್ತೆಯಾಗಿದೆ. ಅದೇ ರೀತಿಯಲ್ಲಿ, ಸುಬ್ಬಯ್ಯ ಮನೆಯಲ್ಲಿಯೂ 27.5 ಲಕ್ಷ ರೂ. ಪತ್ತೆಯಾಗಿದ್ದು, ಒಟ್ಟಾರೆ ಈ ಪ್ರಕರಣದಲ್ಲಿ 82 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ ಎಂದು ಎಸಿಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಏನಿದು ಆರೋಪ ?
ಸರಕಾರದಡಿ ಫಲವತ್ತಾದ, ಕೃಷಿಗೆ ಯೋಗ್ಯವಾಗಿರುವ ಭೂಮಿ ಖರೀದಿಸಿದ ಬಳಿಕ ಅದನ್ನು ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಪಂಗಡದ ಭೂರಹಿತ ಫಲಾನುಭವಿಗಳಿಗೆ ಮಂಜೂರು ಮಾಡುವ ಯೋಜನೆ ಇದಾಗಿದೆ.
ಆದರೆ ಕೆಲ ಅಧಿಕಾರಿಗಳು, ಕಳಪೆಯಾಗಿರುವ ಭೂಮಿ ಅನ್ನು ಮಧ್ಯವರ್ತಿಗಳ ಮೂಲಕ ಕೃಷಿಕರಿಂದ ಖರೀದಿಸುತ್ತಾರೆ. ನಿಗದಿಯಂತೆ ಹೆಚ್ಚಿನ ಮೊತ್ತವನ್ನು ಮಧ್ಯವರ್ತಿಗಳಿಗೆ ಮಂಜೂರು ಮಾಡಿಸುತ್ತಾರೆ. ಬಳಿಕ, ಮಧ್ಯವರ್ತಿಗಳು ಮತ್ತು ಅಧಿಕಾರಿಗಳು ಸೇರಿ ಹೆಚ್ಚುವರಿ ಹಣವನ್ನು ಹಂಚಿಕೆ ಮಾಡಿಕೊಳ್ಳುತ್ತಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm