ಬ್ರೇಕಿಂಗ್ ನ್ಯೂಸ್
28-08-20 03:01 pm Headline Karnataka News Network ಕ್ರೈಂ
ಹುಬ್ಬಳ್ಳಿ , ಆಗಸ್ಟ್ 28: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಇಬ್ಬರು ಯುವಕರ ಕೊಲೆ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೇಶ್ವಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಶ್ರೀನಿವಾಸ್ ಪರಶುರಾಮ ಹಿರೇಕುಂಬಿ (26) ಅವಿನಾಶ್ ಬಸವರಾಜ ನರಗುಂದ (29) ಸಂಜೀವ ರೇವಣಸಿದ್ದಪ್ಪ ವಡ್ಡರ (28) ಮತ್ತು ಮಧು ಕಲ್ಮೇಶ ಹಾದಿಮನಿ (25) ಬಂಧಿತ ಆರೋಪಿಗಳು. ಪ್ರಕರಣ ನಡೆದ 24 ಗಂಟೆಗಳಲ್ಲಿಯೇ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ನಿಯಾಜ್ ಜೋರಮ್ಮನವರ ಮತ್ತು ಈತನ ಗೆಳೆಯ ಮಂಜುನಾಥ ಕಬ್ಬಿನ್ ಇಬ್ಬರನ್ನು ನಾಲ್ವರು ಕಬ್ಬಿಣದ ರಾಡ್ನಿಂದ ಹೊಡೆದು ಹತ್ಯೆ ಮಾಡಿದ್ದರು. ಇದರಲ್ಲಿ ಪ್ರಮುಖ ಆರೋಪಿ ಶ್ರೀನಿವಾಸ್ ಅಲಿಯಾಸ್ ಸೀನು ನಿಯಾಜ್ನೊಂದಿಗೆ ಜಗಳವಾಡಿಕೊಂಡಿದ್ದ. ಅದೇ ಕಾರಣಕ್ಕೆ ಗೆಳೆಯರೊಂದಿಗೆ ಬಂದು ಹತ್ಯೆ ಮಾಡಿದ್ದಾನೆ.

ಸೀನುಗೆ ಸಾಥ್ ನೀಡಿದ ಮೂವರು ಸ್ನೇಹಿತರ ಬಂಧನವಾಗಿದೆ. ಮೃತ ಇಬ್ಬರು ಮತ್ತು ಆರೋಪಿಗಳು ಒಂದೇ ಪ್ರದೇಶದವರಾಗಿದ್ದು, ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ.
ಹುಬ್ಬಳ್ಳಿ ಗೋಪನಕೊಪ್ಪ ಸಿದ್ರಾಮೇಶ್ವರನಗರ 3ನೇ ಕ್ರಾಸ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಂಜುನಾಥ ಕಬ್ಬಿನ್ ಹಾಗೂ ನಿಯಾಜ್ ಜೋರಮ್ಮನವರ ಇಬ್ಬರನ್ನು ಕಬ್ಬಿಣದ ರಾಡಿನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೇಶ್ವಾಪುರ ಠಾಣೆಯ ಪೊಲೀಸರು 24 ಗಂಟೆಗಳಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
20-11-25 03:30 pm
HK News Desk
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 10:48 pm
Mangalore Correspondent
Mangalore, Dharmasthala Case: ಧರ್ಮಸ್ಥಳ ಪ್ರಕರಣ...
20-11-25 10:08 pm
'ಮಹಿಷಾಸುರ'ನ ವೇಷ ಕಳಚುತ್ತಿದ್ದಂತೆ ಯಕ್ಷಗಾನ ಕಲಾವಿದ...
20-11-25 01:42 pm
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
20-11-25 10:53 pm
Bangalore Correspondent
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm