ಬ್ರೇಕಿಂಗ್ ನ್ಯೂಸ್
26-05-21 01:50 pm Headline Karnataka News Network ಕ್ರೈಂ
Photo credits : Representative Image
ಬಾಗಲಕೋಟೆ, ಮೇ 26 : ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಕನಸು ಕಟ್ಟಿರುತ್ತಾರೆ. ಆದರೆ ಕಂಡ ಕನಸು ಕನಸಾಗಿ ಉಳಿಯುವುದಕ್ಕೆ ಮುಖ್ಯ ಕಾರಣ ಪೋಷಕರೇ ಆಗಿರುತ್ತಾರೆ. ಬಾಲ್ಯ ವಿವಾಹದಂತಹ ಕೆಟ್ಟ ಪದ್ಧತಿಯಲ್ಲಿ ಮಕ್ಕಳನ್ನು ಸಿಲುಕಿ ಅವರ ಭವಿಷ್ಯವನ್ನೇ ಹಾಳುಮಾಡುತ್ತಾರೆ. ಈಗಲೂ ರಾಜ್ಯದ ಹಲವು ಜನರಿಗೆ ಅರಿವಿಲ್ಲ. ಬಾಲ್ಯ ವಿವಾಹದಿಂದ ಮಕ್ಕಳ ಮೇಲಾಗುವ ಪರಿಣಾಮ ಇನ್ನು ತಿಳಿದಿಲ್ಲ. ಈ ಬಗ್ಗೆ ಎಷ್ಟು ಅರಿವು ಮೂಡಿಸಿದರೂ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಜಿಲ್ಲೆಯಲ್ಲಿ ಲಾಕ್ಡೌನ್ ನಡುವೆಯೂ ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಆದರೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ಹೋಗಿ ವಿವಾಹಗಳನ್ನು ತಡೆದಿದ್ದಾರೆ.

ಬಾಗಲಕೋಟೆಯಲ್ಲಿ ಲಾಕ್ಡೌನ್ ನಡುವೆ ಬಾಲ್ಯ ವಿವಾಹ ನಿಗದಿಯಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಏಪ್ರಿಲ್, ಮೇನಲ್ಲಿ ಸುಮಾರು 35 ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಈ ಪೈಕಿ 28 ಬಾಲ್ಯ ವಿವಾಹಗಳನ್ನು ಅಧಿಕಾರಿಗಳು ತಡೆದಿದ್ದಾರೆ. ಅದಾಗ್ಯೂ 7 ಬಾಲ್ಯ ವಿವಾಹಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಅಶೋಕ ಬಸವಣ್ಣವರ ಮಾಹಿತಿ ನೀಡಿದ್ದಾರೆ. ಏಪ್ರಿಲ್, ಮೇ ತಿಂಗಳು ನಡೆದ 7 ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ
ಕಳೆದ ವರ್ಷವೂ ಜಿಲ್ಲೆಯಲ್ಲಿ ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ ನಡೆದಿತ್ತು. 113 ಬಾಲ್ಯ ವಿವಾಹಗಳ ಬಗ್ಗೆ ಇಲಾಖೆ ಗಮನಕ್ಕೆ ಮಾಹಿತಿ ಬಂದಿತ್ತು. ಈ ಪೈಕಿ 95 ಬಾಲ್ಯ ವಿವಾಹಗಳನ್ನು ಜಿಲ್ಲಾಡಳಿತ ತಡೆದಿತ್ತು. ಅದಾಗ್ಯೂ ಸುಮಾರು 18 ಬಾಲ್ಯ ವಿವಾಹ ನಡೆದು ಹೋಗಿದೆ. ಈ ಪೈಕಿ ಪ್ರಕರಣ ಮಾತ್ರ ದಾಖಲಾಗಿದ್ದು, ಉಳಿದ ಎಂಟು ಪ್ರಕರಣ ದಾಖಲಾಗಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.
28 Child Marriages in the Bagalkot district were prevented by officials during this lockdown.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm