ಬ್ರೇಕಿಂಗ್ ನ್ಯೂಸ್
26-05-21 01:50 pm Headline Karnataka News Network ಕ್ರೈಂ
Photo credits : Representative Image
ಬಾಗಲಕೋಟೆ, ಮೇ 26 : ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಕನಸು ಕಟ್ಟಿರುತ್ತಾರೆ. ಆದರೆ ಕಂಡ ಕನಸು ಕನಸಾಗಿ ಉಳಿಯುವುದಕ್ಕೆ ಮುಖ್ಯ ಕಾರಣ ಪೋಷಕರೇ ಆಗಿರುತ್ತಾರೆ. ಬಾಲ್ಯ ವಿವಾಹದಂತಹ ಕೆಟ್ಟ ಪದ್ಧತಿಯಲ್ಲಿ ಮಕ್ಕಳನ್ನು ಸಿಲುಕಿ ಅವರ ಭವಿಷ್ಯವನ್ನೇ ಹಾಳುಮಾಡುತ್ತಾರೆ. ಈಗಲೂ ರಾಜ್ಯದ ಹಲವು ಜನರಿಗೆ ಅರಿವಿಲ್ಲ. ಬಾಲ್ಯ ವಿವಾಹದಿಂದ ಮಕ್ಕಳ ಮೇಲಾಗುವ ಪರಿಣಾಮ ಇನ್ನು ತಿಳಿದಿಲ್ಲ. ಈ ಬಗ್ಗೆ ಎಷ್ಟು ಅರಿವು ಮೂಡಿಸಿದರೂ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಜಿಲ್ಲೆಯಲ್ಲಿ ಲಾಕ್ಡೌನ್ ನಡುವೆಯೂ ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಆದರೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ಹೋಗಿ ವಿವಾಹಗಳನ್ನು ತಡೆದಿದ್ದಾರೆ.

ಬಾಗಲಕೋಟೆಯಲ್ಲಿ ಲಾಕ್ಡೌನ್ ನಡುವೆ ಬಾಲ್ಯ ವಿವಾಹ ನಿಗದಿಯಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಏಪ್ರಿಲ್, ಮೇನಲ್ಲಿ ಸುಮಾರು 35 ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಈ ಪೈಕಿ 28 ಬಾಲ್ಯ ವಿವಾಹಗಳನ್ನು ಅಧಿಕಾರಿಗಳು ತಡೆದಿದ್ದಾರೆ. ಅದಾಗ್ಯೂ 7 ಬಾಲ್ಯ ವಿವಾಹಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಅಶೋಕ ಬಸವಣ್ಣವರ ಮಾಹಿತಿ ನೀಡಿದ್ದಾರೆ. ಏಪ್ರಿಲ್, ಮೇ ತಿಂಗಳು ನಡೆದ 7 ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ
ಕಳೆದ ವರ್ಷವೂ ಜಿಲ್ಲೆಯಲ್ಲಿ ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ ನಡೆದಿತ್ತು. 113 ಬಾಲ್ಯ ವಿವಾಹಗಳ ಬಗ್ಗೆ ಇಲಾಖೆ ಗಮನಕ್ಕೆ ಮಾಹಿತಿ ಬಂದಿತ್ತು. ಈ ಪೈಕಿ 95 ಬಾಲ್ಯ ವಿವಾಹಗಳನ್ನು ಜಿಲ್ಲಾಡಳಿತ ತಡೆದಿತ್ತು. ಅದಾಗ್ಯೂ ಸುಮಾರು 18 ಬಾಲ್ಯ ವಿವಾಹ ನಡೆದು ಹೋಗಿದೆ. ಈ ಪೈಕಿ ಪ್ರಕರಣ ಮಾತ್ರ ದಾಖಲಾಗಿದ್ದು, ಉಳಿದ ಎಂಟು ಪ್ರಕರಣ ದಾಖಲಾಗಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.
28 Child Marriages in the Bagalkot district were prevented by officials during this lockdown.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 08:27 pm
HK News Staffer
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
ದ.ಕ. - ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಸ...
13-03-26 01:51 pm
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm