ಬ್ರೇಕಿಂಗ್ ನ್ಯೂಸ್
30-05-21 04:09 pm Mangaluru Correspondent ಕ್ರೈಂ
ಸುಳ್ಯ, ಮೇ 30: ಜುವೆಲ್ಲರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಬಂಧಿಸಿದ್ದ ಆರೋಪಿಯೊಬ್ಬ ಚಿನ್ನದ ಉಂಗುರಗಳನ್ನೇ ನುಂಗಿರುವುದು ಬೆಳಕಿಗೆ ಬಂದಿದೆ.
ಸುಳ್ಯದ ಜುವೆಲ್ಲರಿಯಲ್ಲಿ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಮೇ 28 ರಂದು ಬಂಧಿಸಿದ್ದರು. ಆರೋಪಿಗಳ ಪೈಕಿ ತ್ರಿಶೂರ್ ಜಿಲ್ಲೆಯ ಮೂಲದ ಶಿಬು ಎಂಬಾತ ನಿನ್ನೆ ರಾತ್ರಿ 9 ಗಂಟೆಗೆ ತೀವ್ರ ಹೊಟ್ಟೆ ನೋವಿಗೆ ಒಳಗಾಗಿದ್ದು ಕೂಡಲೇ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಎಕ್ಸ್ ರೇ ನಡೆಸಿ ಪರೀಕ್ಷೆಗೆ ಒಳಪಡಿಸಿದಾಗ ಹೊಟ್ಟೆಯಲ್ಲಿ ಚಿನ್ನದ ಉಂಗುರ ಇರುವುದು ಪತ್ತೆಯಾಗಿದೆ. ಇಂದು ಬೆಳಗ್ಗೆ ಹೊಟ್ಟೆಯಿಂದ ಹಲವಾರು ಉಂಗುರಗಳನ್ನು ಹೊರಬಂದಿದ್ದು 35 ಗ್ರಾಮ್ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಳಿಕ ಶಿಬುವನ್ನು ವಿಚಾರಣೆ ನಡೆಸಿದಾಗ ಪೊಲೀಸರ ಕೈಗೆ ಸಿಕ್ಕಿಬೀಳುವುದನ್ನು ತಪ್ಪಿಸಲೆಂದು ಚಿನ್ನದ ಉಂಗುರಗಳನ್ನು ಐಸ್ ಕ್ರೀಂ ಜೊತೆಗೆ ನುಂಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿ ಆರೋಗ್ಯವಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸುಳ್ಯ ಪೇಟೆಯಲ್ಲಿರುವ ಮೋಹನ್ ಜುವೆಲ್ಲರಿಯಿಂದ ಕಳೆದ ಮಾರ್ಚ್ 31 ರಂದು ರಾತ್ರಿ ಕಳ್ಳರು ನುಗ್ಗಿ ಚಿನ್ನಾಭರಣ ಕಳವುಗೈದಿದ್ದರು. ತನಿಖೆ ನಡೆಸಿದ ಪೊಲೀಸರು ಕೇರಳದ ಕಣ್ಣೂರು ಜಿಲ್ಲೆಯ ಮಹಮ್ಮದ್ ಬಶೀರ್ ಮತ್ತು ತ್ರಿಶೂರಿನ ಶಿಬುವನ್ನು ಬಂಧಿಸಿದ್ದರು.
READ: ಸುಳ್ಯ ; ಜುವೆಲ್ಲರಿಯಿಂದ ಚಿನ್ನಾಭರಣ ದೋಚಿದ್ದ ಅಂತಾರಾಜ್ಯ ಕಳ್ಳರ ಸೆರೆ
Sullia property Gold theft case accused swallows 34 grams Gold to hide from DK Police seized.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm