ಬ್ರೇಕಿಂಗ್ ನ್ಯೂಸ್
30-05-21 04:09 pm Mangaluru Correspondent ಕ್ರೈಂ
ಸುಳ್ಯ, ಮೇ 30: ಜುವೆಲ್ಲರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಬಂಧಿಸಿದ್ದ ಆರೋಪಿಯೊಬ್ಬ ಚಿನ್ನದ ಉಂಗುರಗಳನ್ನೇ ನುಂಗಿರುವುದು ಬೆಳಕಿಗೆ ಬಂದಿದೆ.
ಸುಳ್ಯದ ಜುವೆಲ್ಲರಿಯಲ್ಲಿ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಮೇ 28 ರಂದು ಬಂಧಿಸಿದ್ದರು. ಆರೋಪಿಗಳ ಪೈಕಿ ತ್ರಿಶೂರ್ ಜಿಲ್ಲೆಯ ಮೂಲದ ಶಿಬು ಎಂಬಾತ ನಿನ್ನೆ ರಾತ್ರಿ 9 ಗಂಟೆಗೆ ತೀವ್ರ ಹೊಟ್ಟೆ ನೋವಿಗೆ ಒಳಗಾಗಿದ್ದು ಕೂಡಲೇ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಎಕ್ಸ್ ರೇ ನಡೆಸಿ ಪರೀಕ್ಷೆಗೆ ಒಳಪಡಿಸಿದಾಗ ಹೊಟ್ಟೆಯಲ್ಲಿ ಚಿನ್ನದ ಉಂಗುರ ಇರುವುದು ಪತ್ತೆಯಾಗಿದೆ. ಇಂದು ಬೆಳಗ್ಗೆ ಹೊಟ್ಟೆಯಿಂದ ಹಲವಾರು ಉಂಗುರಗಳನ್ನು ಹೊರಬಂದಿದ್ದು 35 ಗ್ರಾಮ್ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಳಿಕ ಶಿಬುವನ್ನು ವಿಚಾರಣೆ ನಡೆಸಿದಾಗ ಪೊಲೀಸರ ಕೈಗೆ ಸಿಕ್ಕಿಬೀಳುವುದನ್ನು ತಪ್ಪಿಸಲೆಂದು ಚಿನ್ನದ ಉಂಗುರಗಳನ್ನು ಐಸ್ ಕ್ರೀಂ ಜೊತೆಗೆ ನುಂಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿ ಆರೋಗ್ಯವಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸುಳ್ಯ ಪೇಟೆಯಲ್ಲಿರುವ ಮೋಹನ್ ಜುವೆಲ್ಲರಿಯಿಂದ ಕಳೆದ ಮಾರ್ಚ್ 31 ರಂದು ರಾತ್ರಿ ಕಳ್ಳರು ನುಗ್ಗಿ ಚಿನ್ನಾಭರಣ ಕಳವುಗೈದಿದ್ದರು. ತನಿಖೆ ನಡೆಸಿದ ಪೊಲೀಸರು ಕೇರಳದ ಕಣ್ಣೂರು ಜಿಲ್ಲೆಯ ಮಹಮ್ಮದ್ ಬಶೀರ್ ಮತ್ತು ತ್ರಿಶೂರಿನ ಶಿಬುವನ್ನು ಬಂಧಿಸಿದ್ದರು.
READ: ಸುಳ್ಯ ; ಜುವೆಲ್ಲರಿಯಿಂದ ಚಿನ್ನಾಭರಣ ದೋಚಿದ್ದ ಅಂತಾರಾಜ್ಯ ಕಳ್ಳರ ಸೆರೆ
Sullia property Gold theft case accused swallows 34 grams Gold to hide from DK Police seized.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am