ಬ್ರೇಕಿಂಗ್ ನ್ಯೂಸ್
30-05-21 04:09 pm Mangaluru Correspondent ಕ್ರೈಂ
ಸುಳ್ಯ, ಮೇ 30: ಜುವೆಲ್ಲರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಬಂಧಿಸಿದ್ದ ಆರೋಪಿಯೊಬ್ಬ ಚಿನ್ನದ ಉಂಗುರಗಳನ್ನೇ ನುಂಗಿರುವುದು ಬೆಳಕಿಗೆ ಬಂದಿದೆ.
ಸುಳ್ಯದ ಜುವೆಲ್ಲರಿಯಲ್ಲಿ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಮೇ 28 ರಂದು ಬಂಧಿಸಿದ್ದರು. ಆರೋಪಿಗಳ ಪೈಕಿ ತ್ರಿಶೂರ್ ಜಿಲ್ಲೆಯ ಮೂಲದ ಶಿಬು ಎಂಬಾತ ನಿನ್ನೆ ರಾತ್ರಿ 9 ಗಂಟೆಗೆ ತೀವ್ರ ಹೊಟ್ಟೆ ನೋವಿಗೆ ಒಳಗಾಗಿದ್ದು ಕೂಡಲೇ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಎಕ್ಸ್ ರೇ ನಡೆಸಿ ಪರೀಕ್ಷೆಗೆ ಒಳಪಡಿಸಿದಾಗ ಹೊಟ್ಟೆಯಲ್ಲಿ ಚಿನ್ನದ ಉಂಗುರ ಇರುವುದು ಪತ್ತೆಯಾಗಿದೆ. ಇಂದು ಬೆಳಗ್ಗೆ ಹೊಟ್ಟೆಯಿಂದ ಹಲವಾರು ಉಂಗುರಗಳನ್ನು ಹೊರಬಂದಿದ್ದು 35 ಗ್ರಾಮ್ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಳಿಕ ಶಿಬುವನ್ನು ವಿಚಾರಣೆ ನಡೆಸಿದಾಗ ಪೊಲೀಸರ ಕೈಗೆ ಸಿಕ್ಕಿಬೀಳುವುದನ್ನು ತಪ್ಪಿಸಲೆಂದು ಚಿನ್ನದ ಉಂಗುರಗಳನ್ನು ಐಸ್ ಕ್ರೀಂ ಜೊತೆಗೆ ನುಂಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿ ಆರೋಗ್ಯವಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸುಳ್ಯ ಪೇಟೆಯಲ್ಲಿರುವ ಮೋಹನ್ ಜುವೆಲ್ಲರಿಯಿಂದ ಕಳೆದ ಮಾರ್ಚ್ 31 ರಂದು ರಾತ್ರಿ ಕಳ್ಳರು ನುಗ್ಗಿ ಚಿನ್ನಾಭರಣ ಕಳವುಗೈದಿದ್ದರು. ತನಿಖೆ ನಡೆಸಿದ ಪೊಲೀಸರು ಕೇರಳದ ಕಣ್ಣೂರು ಜಿಲ್ಲೆಯ ಮಹಮ್ಮದ್ ಬಶೀರ್ ಮತ್ತು ತ್ರಿಶೂರಿನ ಶಿಬುವನ್ನು ಬಂಧಿಸಿದ್ದರು.
READ: ಸುಳ್ಯ ; ಜುವೆಲ್ಲರಿಯಿಂದ ಚಿನ್ನಾಭರಣ ದೋಚಿದ್ದ ಅಂತಾರಾಜ್ಯ ಕಳ್ಳರ ಸೆರೆ
Sullia property Gold theft case accused swallows 34 grams Gold to hide from DK Police seized.
14-06-25 11:05 pm
Bangalore Correspondent
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
15-06-25 03:20 pm
Mangalore Correspondent
Mangalore Rain, Compound Wall Collapsed Video...
15-06-25 12:12 pm
Rahiman Murder, Senior Advocate Balan, Mangal...
14-06-25 10:21 pm
Mangalore Heavy Rain, Traffic, Pumpwell: ಒಂದೇ...
14-06-25 09:00 pm
Bangalore RCB Stampede, Veerappa Moily: ಕಾಲ್ತ...
14-06-25 02:49 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm