ಬ್ರೇಕಿಂಗ್ ನ್ಯೂಸ್
31-05-21 12:33 pm Headline Karnataka News Network ಕ್ರೈಂ
ಚೆನ್ನೈ, ಮೇ 31: ತಮಿಳು ಚಿತ್ರನಟಿ ನೀಡಿದ ಅತ್ಯಾಚಾರ ದೂರಿನ ಆರೋಪದ ಮೇಲೆ ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂದನ್ ವಿರುದ್ಧ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ. ಮಾಜಿ ಸಚಿವರು ಮದುವೆಯ ನೆಪದಲ್ಲಿ ತನ್ನನ್ನು ಮೋಸ ಮಾಡಿರುವುದಾಗಿ ನಟಿ ದೂರಿನಲ್ಲಿ ಆರೋಪಿಸಿದ್ದಾರೆ.
ಅತ್ಯಾಚಾರದ ಹೊರತಾಗಿ ಮಾಜಿ ಸಚಿವ ಮಣಿಕಂದನ್ ವಿರುದ್ಧ ಚೆನ್ನೈನ ಅಡ್ಯಾರ್ ಆಲ್ ವುಮೆನ್ ಪೊಲೀಸರು ಐಪಿಸಿ ಕಾಯ್ದೆಯಡಿ ಕ್ರಿಮಿನಲ್ ಬೆದರಿಕೆ, ಮಹಿಳೆಯ ಒಪ್ಪಿಗೆ ಇಲ್ಲದೆ ಗರ್ಭಪಾತ ಮಾಡಿಸಿರುವ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.


ಮಾಜಿ ಸಚಿವ ಮಣಿಕಂದನ್ ಕಳೆದ ಐದು ವರ್ಷಗಳಿಂದ ತನ್ನ ಜತೆ ಸಂಬಂಧ ಹೊಂದಿರುವುದಾಗಿ ನಟಿ ದೂರಿನಲ್ಲಿ ತಿಳಿಸಿದ್ದಾರೆ. ತಾನು ಗರ್ಭಿಣಿಯಾದಾಗ ಬಲವಂತದಿಂದ ಗರ್ಭಪಾತ ಮಾಡಿಸಿರುವುದಾಗಿಯೂ ದೂರಿನಲ್ಲಿ ಆರೋಪಿಸಲಾಗಿದೆ.
ತಮ್ಮಿಬ್ಬರ ಸಂಬಂಧದ ನಡುವೆ ಮೂರು ಬಾರಿ ಗರ್ಭಪಾತ ಮಾಡಿಸಿದ್ದು, ಮಾಜಿ ಸಚಿವ ಪ್ರತಿ ಬಾರಿಯೂ ಬಲವಂತವಾಗಿ ಗರ್ಭಪಾತ ಮಾಡಿಸಿದ್ದು, ಮದುವೆಯಾದ ಮೇಲೆ ಮಗುವಿಗೆ ಜನನ ನೀಡಲಿ ಎಂದು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿ ವಿವರಿಸಿದೆ.
ಒಂದು ವೇಳೆ ದೇಶವನ್ನು ಬಿಟ್ಟು ಹೋಗದಿದ್ದರೆ ತನ್ನ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡುವುದಾಗಿ ಮಣಿಕಂದನ್ ಬೆದರಿಕೆ ಒಡ್ಡಿದ್ದಲ್ಲದೇ, ತಮ್ಮ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ.
A case has been booked against ex-AIADMK Minister M Manikandan following a complaint filed by an actor who had accused him of cheating her in a relationship. On Sunday, the Adyar All-Women Police Station registered a case against him under various sections of the Indian Penal Code (IPC) including rape and cheating.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am