ಬ್ರೇಕಿಂಗ್ ನ್ಯೂಸ್
02-06-21 12:29 pm Bangalore Correspondent ಕ್ರೈಂ
ಬೆಂಗಳೂರು, ಜೂ. 02: ಬಾಂಗ್ಲಾದೇಶಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಈ ಮೂಲಕ ಒಂದೇ ಪ್ರಕರಣದಲ್ಲಿ ಎರಡು ಬಾರಿ ಶೂಟೌಟ್ ಮಾಡಿ ಮೂವರ ಕಾಲಿಗೆ ಗುಂಡು ಹಾರಿಸಿ ವಿಕೃತ ಕಾಮುಕರಿಗೆ ರಾಮಮೂರ್ತಿನಗರ ಪೊಲೀಸರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಬಾಂಗ್ಲಾ ಮೂಲದ ಶೂಬಜ್ ಗುಂಡೇಟು ತಿಂದ ಆರೋಪಿ. ಯುವತಿಯ ಗುಪ್ತಾಂಗಕ್ಕೆ ಕಾಲಿನಲ್ಲಿ ಒದ್ದು ಹಲ್ಲೆ ಮಾಡಿದ್ದ. ವಿಡಿಯೋ ವೈರಲ್ ಆಗಿತ್ತು. ಪ್ರಕರಣ ಬೆಳಕಿಗೆ ಬಂದ ನಂತರ ರಾಂಪುರ ಸಮೀಪ ತಲೆ ಮರೆಸಿಕೊಂಡಿದ್ದ ಶೂಬಜ್ನನ್ನು ಬಂಧಿಸಲು ರಾಮಮೂರ್ತಿನಗರ ಪೊಲೀಸರು ತೆರಳಿದ್ದಾರೆ. ಬಂಧನಕ್ಕೆ ತೆರಳಿದ ಪೊಲೀಸರ ಮೇಲೆ ಬಟನ್ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ರಾಮಮೂರ್ತಿನಗರ ಪಿಎಸ್ಐ ಶಿವರಾಜ್ ನಿಂದ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಆ ಬಳಿಕ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದ ಆರೋಪಿ ಶೂಬಜ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಈ ವೇಳೆ ಪಿಎಸ್ಐ ಶಿವರಾಜ್ ಪೊಲೀಸ್ ಸಿಬ್ಬಂದಿ ದೇವೇಂದ್ರ ಸಿಂಗ್ ಅವರಿಗೆ ಸಣ್ಣ ಗಾಯವಾಗಿದೆ.


ಬಂಧಿತರ ಸಂಖ್ಯೆ ಹತ್ತಕ್ಕೆ ಏರಿಕೆ: ಬಾಂಗ್ಲಾದೇಶಿ ಮೂಲದ ಯುವತಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಹತ್ತಕ್ಕೆ ಏರಿದೆ. ಸಂತ್ರಸ್ತ ಯುವತಿ, ಬಂಧಿತ ಆರೋಪಿಗಳೆಲ್ಲರೂ ಬಾಂಗ್ಲಾದೇಶಿಯರೇ. ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು.
ಹಣಕಾಸಿನ ವಿಚಾರವಾಗಿ ಜಗಳ ತೆಗೆದು ಮಸಾಜ್ ಪಾರ್ಲರ್ ನಡೆಸುತ್ತಿದ್ದ ಯುವತಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಮಿಗಿಲಾಗಿ ಯುವತಿ ಜತೆ ವಿಕೃತವಾಗಿ ನಡೆದುಕೊಂಡು ದೌರ್ಜನ್ಯ ಎಸಗಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಬಳಿಕ ರಾಮಮೂರ್ತಿನಗರ ಪೊಲೀಸರು ಪ್ರಕರಣವನ್ನು ಪತ್ತೆ ಮಾಡಿದ್ದರು.
ಬಾಂಗ್ಲಾ ಮತಾಂಧರಿಂದ ಬೆಂಗಳೂರಿನಲ್ಲಿ ಮೃಗೀಯ ಕೃತ್ಯ ; ಚಿತ್ರಹಿಂಸೆ ವಿಡಿಯೋ ಹಿಂದಿತ್ತು ಕರಾಳ ವೇಶ್ಯಾವಾಟಿಕೆ ದಂಧೆ !
ಬೆಂಗಳೂರು ಅತ್ಯಾಚಾರ ಕೇಸ್ ; ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ಧತೆ
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am