ಬ್ರೇಕಿಂಗ್ ನ್ಯೂಸ್
02-06-21 02:58 pm Mangalore Correspondent ಕ್ರೈಂ
ಮಂಗಳೂರು, ಜೂನ್ 2: ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಬಗ್ಗೆ ಅವಹೇಳನಕಾರಿ ಸಂದೇಶ ರವಾನಿಸಿದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ಸುಳ್ಯ ತಾಲೂಕಿನ ದುಗ್ಗಲಡ್ಕ ನಿವಾಸಿ ಭವಾನಿಶಂಕರ್(32), ಬಜಾಲ್ ನಿವಾಸಿ ನೌಶಾದ್ (27), ಕಾವೂರು ನಿವಾಸಿ ರವಿ ಅಲಿಯಾಸ್ ಟಿಕ್ಕಿ ರವಿ(38), ಮೂಡುಬಿದ್ರೆ ಧರೆಗುಡ್ಡೆ ನಿವಾಸಿ ಜಯ ಕುಮಾರ್ (33) ಬಂಧಿತರು. ಶರಣ್ ಪಂಪ್ವೆಲ್, ದುರ್ಗಾವಾಹಿನಿ ಮಹಿಳಾ ಸಂಘಟನೆಯ ಯುವತಿಯರನ್ನು ಕಾಮತೃಷೆಗೆ ಬಳಸಿಕೊಳ್ಳುತ್ತಿದ್ದಾರೆಂದು ಬಿಂಬಿಸಿ ವಾಟ್ಸಪ್ ಮೆಸೇಜ್ ಹರಿದಾಡಿತ್ತು. ಶರಣ್ ಪಂಪ್ವೆಲ್ ಜೊತೆಗೆ ಯುವತಿಯೊಬ್ಬಳು ಚಾಟ್ ಮಾಡುತ್ತಿರುವ ರೀತಿಯ ವಾಟ್ಸಪ್ ಸ್ಕ್ರೀನ್ ಶಾಟ್ ಕೂಡ ಹರಿದಾಡಿದ್ದು ಅದನ್ನು ಭಾರೀ ವೈರಲ್ ಮಾಡಲಾಗಿತ್ತು.


ಈ ಬಗ್ಗೆ ದುರ್ಗಾವಾಹಿನಿ ಮಹಿಳಾ ಸಂಘಟನೆಯ ಸದಸ್ಯರು ಮಂಗಳೂರು ಪೂರ್ವ ಠಾಣೆಗೆ ದೂರು ನೀಡಿದ್ದರು. ಈ ಮೆಸೇಜನ್ನು ಅತಿ ಹೆಚ್ಚು ಗ್ರೂಪುಗಳಿಗೆ ಫಾರ್ವರ್ಡ್ ಮಾಡಿ, ಶರಣ್ ಪಂಪ್ವೆಲ್ ಹೆಸರಿಗೆ ಕಳಂಕ ತರುವ ರೀತಿ ಬಿಂಬಿಸಿದ ಆರೋಪದಲ್ಲಿ ನಾಲ್ವರು ಯುವಕರನ್ನು ಬಂಧಿಸಲಾಗಿದೆ. ಆದರೆ, ಈ ಸ್ಕ್ರೀನ್ ಶಾಟ್ ಮೆಸೇಜನ್ನು ಯಾರು ಕ್ರಿಯೇಟ್ ಮಾಡಿದ್ದರು ಮತ್ತು ಅದು ಎಷ್ಟು ಸಾಚಾತನದ್ದು ಎನ್ನುವ ಬಗ್ಗೆ ತಾಂತ್ರಿಕ ಪರಿಣತರು ನಿರ್ಧರಿಸಲಿದ್ದಾರೆ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಐದಾರು ದಿನಗಳ ಹಿಂದೆ ಶರಣ್ ಪಂಪ್ವೆಲ್ ಹೆಸರಲ್ಲಿದ್ದ ವಾಟ್ಸಪ್ ಮೆಸೇಜ್ ಭಾರೀ ವೈರಲ್ ಆಗಿದ್ದಲ್ಲದೆ, ಅದನ್ನು ಹಿಂದು ಸಂಘಟನೆಗಳ ವಿರೋಧಿಗಳು ಸೇರಿ ವೈರಲ್ ಮಾಡಿದ್ದರು ಅನ್ನೋ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಸ್ವತಃ ಶರಣ್ ಬಳಿ ಕೇಳಿದಾಗ, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಇದನ್ನು ಯಾರು ಮಾಡುತ್ತಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಲು ಆಗ್ರಹ ಮಾಡಿದ್ದೇವೆ ಎಂದು ತಿಳಿಸಿದ್ದರು. ಬಂಧಿತ ಆರೋಪಿಗಳು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾಗುತ್ತಿದ್ದು, ಕಾಂಗ್ರೆಸ್ ಮುಖಂಡರೇ ಬೇಲ್ ಕೊಡಿಸಿದ್ದಾರೆಂದು ಹೇಳಲಾಗುತ್ತಿದೆ.
Mangalore Police have arrested four people for allegedly posting derogatory messages against Durga Vahini and Vishwa Hindu Parishad (VHP) leader Sharan Pumpwell on social media. Durga Vahini is the women's wing of the VHP. The four were taken into custody on Tuesday, June 1.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am