ಬ್ರೇಕಿಂಗ್ ನ್ಯೂಸ್
02-06-21 03:22 pm Mangalore Correspondent ಕ್ರೈಂ
ಮಂಗಳೂರು, ಜೂನ್ 2: 20 ವರ್ಷದ ಹುಡುಗಿಯನ್ನು ಮದುವೆ ಮಾಡಿಕೊಡುವಂತೆ ಒತ್ತಾಯಿಸಿದ್ದಲ್ಲದೆ, ರೌಡಿಗಳನ್ನು ಕಟ್ಟಿಕೊಂಡು ಯುವತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ಕಂಕನಾಡಿ ನಗರ ಠಾಣೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.


ಮಂಗಳೂರು ನಗರದ ಶಕ್ತಿನಗರದ ಬಳಿಯ ಪ್ರೀತಿ ನಗರದ ಯುವತಿಯನ್ನು ಹೇಮಂತ್ ಎಂಬಾತ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದು, ಇದನ್ನು ಅರಿತ ಆಕೆಯ ಸೋದರರು ಹೇಮಂತನಿಗೆ ಫೋನ್ ಮಾಡಿ ಬೆದರಿಕೆ ಹಾಕಿದ್ದರು. ತಂಗಿಯ ವಿಚಾರಕ್ಕೆ ಬರದೆ ದೂರ ಇರುವಂತೆ ಹೇಳಿದ್ದರು. ಇದರಿಂದ ಸಿಟ್ಟಿಗೆದ್ದ ಹೇಮಂತ್, ಮೇ 30ರಂದು ರಾತ್ರಿ ಎಂಟು ಗಂಟೆಗೆ ಏಳೆಂಟು ಮಂದಿ ರೌಡಿಗಳೊಂದಿಗೆ ಯುವತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.





ಈ ಸಂದರ್ಭ ಯುವತಿಯ ಸೋದರರು ಮನೆಯಲ್ಲಿ ಇರಲಿಲ್ಲ. ಹೀಗಾಗಿ ಮನೆಯಲ್ಲಿದ್ದ ತಾಯಿಯನ್ನು ಬೈದಾಡಿದ್ದಲ್ಲದೆ, ನಿನ್ನ ಮಕ್ಕಳನ್ನು ಜೀವ ಸಹಿತ ಬಿಡುವುದಿಲ್ಲ ಎನ್ನುತ್ತಾ ತಲವಾರು ಮತ್ತು ರಾಡಿನಿಂದ ಮನೆಯಲ್ಲಿದ್ದ ಟಿವಿ, ಸೋಫಾ, ಮಿಕ್ಸಿಗಳಿಗೆ ಹಾನಿ ಮಾಡಿದ್ದಾರೆ. ಬಳಿಕ ತಾಯಿ ಮನೆಯ ಹಿಂಬಾಗಿಲಿನಿಂದ ಹೊರಬಂದು ಬೊಬ್ಬೆ ಹಾಕಿದ್ದು, ಸ್ಥಳೀಯರು ಸೇರುವಷ್ಟರಲ್ಲಿ ಆಗಂತುಕರು ತಾವು ಬಂದಿದ್ದ ಬೈಕ್, ಸ್ಕೂಟರಲ್ಲಿ ಪರಾರಿಯಾಗಿದ್ದಾರೆ. ಈ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಮಹಿಳೆಯ ದೂರಿನಂತೆ ಪ್ರಕರಣ ದಾಖಲಾಗಿತ್ತು.



ಪೊಲೀಸರು ಕೋಡಿಕಲ್ ನಿವಾಸಿ, ಉರ್ವಾ ಠಾಣೆಯ ರೌಡಿಶೀಟರ್ ರಂಜಿತ್ (28), ಉರ್ವಾ ಸ್ಟೋರ್ ನಿವಾಸಿ ಅವಿನಾಶ್ (23), ಕೊಟ್ಟಾರ ಚೌಕಿಯ ಪ್ರಜ್ವಲ್(24), ಕೋಡಿಬೆಂಗ್ರೆ ನಿವಾಸಿ ದೀಕ್ಷಿತ್ (21), ಮೂಲತಃ ಬಂಟ್ವಾಳ ತಾಲೂಕಿನ ಬಾರೆಕ್ಕಾಡು ನಿವಾಸಿ ಹೇಮಂತ್ (22), ಉರ್ವಾ ಸ್ಟೋರಿನ ಧನುಷ್ (19), ಕುಂಜತ್ ಬೈಲಿನ ಯತಿರಾಜ್ (23) ಎಂಬವರನ್ನು ಬಂಧಿಸಿದ್ದಾರೆ. ಈ ಪೈಕಿ ರಂಜಿತ್ ಉರ್ವಾ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು, ಉರ್ವಾದಲ್ಲಿ ಒಂಬತ್ತು ಪ್ರಕರಣ ಮತ್ತು ಕಾವೂರಿನಲ್ಲಿ ಒಂದು ಪ್ರಕರಣ ಎದುರಿಸುತ್ತಿದ್ದಾನೆ. ಅವಿನಾಶ್ ಕೂಡ ಉರ್ವಾ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ಎರಡು ಪ್ರಕರಣ ದಾಖಲಾಗಿದೆ.
Seven accused were arrested regarding the incident where a gang reportedly came armed with lethal weapons, tried to kill a woman, and vandalized her house in Shakthinagar in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm