ಬ್ರೇಕಿಂಗ್ ನ್ಯೂಸ್
02-06-21 03:22 pm Mangalore Correspondent ಕ್ರೈಂ
ಮಂಗಳೂರು, ಜೂನ್ 2: 20 ವರ್ಷದ ಹುಡುಗಿಯನ್ನು ಮದುವೆ ಮಾಡಿಕೊಡುವಂತೆ ಒತ್ತಾಯಿಸಿದ್ದಲ್ಲದೆ, ರೌಡಿಗಳನ್ನು ಕಟ್ಟಿಕೊಂಡು ಯುವತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ಕಂಕನಾಡಿ ನಗರ ಠಾಣೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.


ಮಂಗಳೂರು ನಗರದ ಶಕ್ತಿನಗರದ ಬಳಿಯ ಪ್ರೀತಿ ನಗರದ ಯುವತಿಯನ್ನು ಹೇಮಂತ್ ಎಂಬಾತ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದು, ಇದನ್ನು ಅರಿತ ಆಕೆಯ ಸೋದರರು ಹೇಮಂತನಿಗೆ ಫೋನ್ ಮಾಡಿ ಬೆದರಿಕೆ ಹಾಕಿದ್ದರು. ತಂಗಿಯ ವಿಚಾರಕ್ಕೆ ಬರದೆ ದೂರ ಇರುವಂತೆ ಹೇಳಿದ್ದರು. ಇದರಿಂದ ಸಿಟ್ಟಿಗೆದ್ದ ಹೇಮಂತ್, ಮೇ 30ರಂದು ರಾತ್ರಿ ಎಂಟು ಗಂಟೆಗೆ ಏಳೆಂಟು ಮಂದಿ ರೌಡಿಗಳೊಂದಿಗೆ ಯುವತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.





ಈ ಸಂದರ್ಭ ಯುವತಿಯ ಸೋದರರು ಮನೆಯಲ್ಲಿ ಇರಲಿಲ್ಲ. ಹೀಗಾಗಿ ಮನೆಯಲ್ಲಿದ್ದ ತಾಯಿಯನ್ನು ಬೈದಾಡಿದ್ದಲ್ಲದೆ, ನಿನ್ನ ಮಕ್ಕಳನ್ನು ಜೀವ ಸಹಿತ ಬಿಡುವುದಿಲ್ಲ ಎನ್ನುತ್ತಾ ತಲವಾರು ಮತ್ತು ರಾಡಿನಿಂದ ಮನೆಯಲ್ಲಿದ್ದ ಟಿವಿ, ಸೋಫಾ, ಮಿಕ್ಸಿಗಳಿಗೆ ಹಾನಿ ಮಾಡಿದ್ದಾರೆ. ಬಳಿಕ ತಾಯಿ ಮನೆಯ ಹಿಂಬಾಗಿಲಿನಿಂದ ಹೊರಬಂದು ಬೊಬ್ಬೆ ಹಾಕಿದ್ದು, ಸ್ಥಳೀಯರು ಸೇರುವಷ್ಟರಲ್ಲಿ ಆಗಂತುಕರು ತಾವು ಬಂದಿದ್ದ ಬೈಕ್, ಸ್ಕೂಟರಲ್ಲಿ ಪರಾರಿಯಾಗಿದ್ದಾರೆ. ಈ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಮಹಿಳೆಯ ದೂರಿನಂತೆ ಪ್ರಕರಣ ದಾಖಲಾಗಿತ್ತು.



ಪೊಲೀಸರು ಕೋಡಿಕಲ್ ನಿವಾಸಿ, ಉರ್ವಾ ಠಾಣೆಯ ರೌಡಿಶೀಟರ್ ರಂಜಿತ್ (28), ಉರ್ವಾ ಸ್ಟೋರ್ ನಿವಾಸಿ ಅವಿನಾಶ್ (23), ಕೊಟ್ಟಾರ ಚೌಕಿಯ ಪ್ರಜ್ವಲ್(24), ಕೋಡಿಬೆಂಗ್ರೆ ನಿವಾಸಿ ದೀಕ್ಷಿತ್ (21), ಮೂಲತಃ ಬಂಟ್ವಾಳ ತಾಲೂಕಿನ ಬಾರೆಕ್ಕಾಡು ನಿವಾಸಿ ಹೇಮಂತ್ (22), ಉರ್ವಾ ಸ್ಟೋರಿನ ಧನುಷ್ (19), ಕುಂಜತ್ ಬೈಲಿನ ಯತಿರಾಜ್ (23) ಎಂಬವರನ್ನು ಬಂಧಿಸಿದ್ದಾರೆ. ಈ ಪೈಕಿ ರಂಜಿತ್ ಉರ್ವಾ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು, ಉರ್ವಾದಲ್ಲಿ ಒಂಬತ್ತು ಪ್ರಕರಣ ಮತ್ತು ಕಾವೂರಿನಲ್ಲಿ ಒಂದು ಪ್ರಕರಣ ಎದುರಿಸುತ್ತಿದ್ದಾನೆ. ಅವಿನಾಶ್ ಕೂಡ ಉರ್ವಾ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ಎರಡು ಪ್ರಕರಣ ದಾಖಲಾಗಿದೆ.
Seven accused were arrested regarding the incident where a gang reportedly came armed with lethal weapons, tried to kill a woman, and vandalized her house in Shakthinagar in Mangalore.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am