ಬ್ರೇಕಿಂಗ್ ನ್ಯೂಸ್
02-06-21 03:22 pm Mangalore Correspondent ಕ್ರೈಂ
ಮಂಗಳೂರು, ಜೂನ್ 2: 20 ವರ್ಷದ ಹುಡುಗಿಯನ್ನು ಮದುವೆ ಮಾಡಿಕೊಡುವಂತೆ ಒತ್ತಾಯಿಸಿದ್ದಲ್ಲದೆ, ರೌಡಿಗಳನ್ನು ಕಟ್ಟಿಕೊಂಡು ಯುವತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ಕಂಕನಾಡಿ ನಗರ ಠಾಣೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.


ಮಂಗಳೂರು ನಗರದ ಶಕ್ತಿನಗರದ ಬಳಿಯ ಪ್ರೀತಿ ನಗರದ ಯುವತಿಯನ್ನು ಹೇಮಂತ್ ಎಂಬಾತ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದು, ಇದನ್ನು ಅರಿತ ಆಕೆಯ ಸೋದರರು ಹೇಮಂತನಿಗೆ ಫೋನ್ ಮಾಡಿ ಬೆದರಿಕೆ ಹಾಕಿದ್ದರು. ತಂಗಿಯ ವಿಚಾರಕ್ಕೆ ಬರದೆ ದೂರ ಇರುವಂತೆ ಹೇಳಿದ್ದರು. ಇದರಿಂದ ಸಿಟ್ಟಿಗೆದ್ದ ಹೇಮಂತ್, ಮೇ 30ರಂದು ರಾತ್ರಿ ಎಂಟು ಗಂಟೆಗೆ ಏಳೆಂಟು ಮಂದಿ ರೌಡಿಗಳೊಂದಿಗೆ ಯುವತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.





ಈ ಸಂದರ್ಭ ಯುವತಿಯ ಸೋದರರು ಮನೆಯಲ್ಲಿ ಇರಲಿಲ್ಲ. ಹೀಗಾಗಿ ಮನೆಯಲ್ಲಿದ್ದ ತಾಯಿಯನ್ನು ಬೈದಾಡಿದ್ದಲ್ಲದೆ, ನಿನ್ನ ಮಕ್ಕಳನ್ನು ಜೀವ ಸಹಿತ ಬಿಡುವುದಿಲ್ಲ ಎನ್ನುತ್ತಾ ತಲವಾರು ಮತ್ತು ರಾಡಿನಿಂದ ಮನೆಯಲ್ಲಿದ್ದ ಟಿವಿ, ಸೋಫಾ, ಮಿಕ್ಸಿಗಳಿಗೆ ಹಾನಿ ಮಾಡಿದ್ದಾರೆ. ಬಳಿಕ ತಾಯಿ ಮನೆಯ ಹಿಂಬಾಗಿಲಿನಿಂದ ಹೊರಬಂದು ಬೊಬ್ಬೆ ಹಾಕಿದ್ದು, ಸ್ಥಳೀಯರು ಸೇರುವಷ್ಟರಲ್ಲಿ ಆಗಂತುಕರು ತಾವು ಬಂದಿದ್ದ ಬೈಕ್, ಸ್ಕೂಟರಲ್ಲಿ ಪರಾರಿಯಾಗಿದ್ದಾರೆ. ಈ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಮಹಿಳೆಯ ದೂರಿನಂತೆ ಪ್ರಕರಣ ದಾಖಲಾಗಿತ್ತು.



ಪೊಲೀಸರು ಕೋಡಿಕಲ್ ನಿವಾಸಿ, ಉರ್ವಾ ಠಾಣೆಯ ರೌಡಿಶೀಟರ್ ರಂಜಿತ್ (28), ಉರ್ವಾ ಸ್ಟೋರ್ ನಿವಾಸಿ ಅವಿನಾಶ್ (23), ಕೊಟ್ಟಾರ ಚೌಕಿಯ ಪ್ರಜ್ವಲ್(24), ಕೋಡಿಬೆಂಗ್ರೆ ನಿವಾಸಿ ದೀಕ್ಷಿತ್ (21), ಮೂಲತಃ ಬಂಟ್ವಾಳ ತಾಲೂಕಿನ ಬಾರೆಕ್ಕಾಡು ನಿವಾಸಿ ಹೇಮಂತ್ (22), ಉರ್ವಾ ಸ್ಟೋರಿನ ಧನುಷ್ (19), ಕುಂಜತ್ ಬೈಲಿನ ಯತಿರಾಜ್ (23) ಎಂಬವರನ್ನು ಬಂಧಿಸಿದ್ದಾರೆ. ಈ ಪೈಕಿ ರಂಜಿತ್ ಉರ್ವಾ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು, ಉರ್ವಾದಲ್ಲಿ ಒಂಬತ್ತು ಪ್ರಕರಣ ಮತ್ತು ಕಾವೂರಿನಲ್ಲಿ ಒಂದು ಪ್ರಕರಣ ಎದುರಿಸುತ್ತಿದ್ದಾನೆ. ಅವಿನಾಶ್ ಕೂಡ ಉರ್ವಾ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ಎರಡು ಪ್ರಕರಣ ದಾಖಲಾಗಿದೆ.
Seven accused were arrested regarding the incident where a gang reportedly came armed with lethal weapons, tried to kill a woman, and vandalized her house in Shakthinagar in Mangalore.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm