ಬ್ರೇಕಿಂಗ್ ನ್ಯೂಸ್
02-06-21 03:22 pm Mangalore Correspondent ಕ್ರೈಂ
ಮಂಗಳೂರು, ಜೂನ್ 2: 20 ವರ್ಷದ ಹುಡುಗಿಯನ್ನು ಮದುವೆ ಮಾಡಿಕೊಡುವಂತೆ ಒತ್ತಾಯಿಸಿದ್ದಲ್ಲದೆ, ರೌಡಿಗಳನ್ನು ಕಟ್ಟಿಕೊಂಡು ಯುವತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ಕಂಕನಾಡಿ ನಗರ ಠಾಣೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.


ಮಂಗಳೂರು ನಗರದ ಶಕ್ತಿನಗರದ ಬಳಿಯ ಪ್ರೀತಿ ನಗರದ ಯುವತಿಯನ್ನು ಹೇಮಂತ್ ಎಂಬಾತ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದು, ಇದನ್ನು ಅರಿತ ಆಕೆಯ ಸೋದರರು ಹೇಮಂತನಿಗೆ ಫೋನ್ ಮಾಡಿ ಬೆದರಿಕೆ ಹಾಕಿದ್ದರು. ತಂಗಿಯ ವಿಚಾರಕ್ಕೆ ಬರದೆ ದೂರ ಇರುವಂತೆ ಹೇಳಿದ್ದರು. ಇದರಿಂದ ಸಿಟ್ಟಿಗೆದ್ದ ಹೇಮಂತ್, ಮೇ 30ರಂದು ರಾತ್ರಿ ಎಂಟು ಗಂಟೆಗೆ ಏಳೆಂಟು ಮಂದಿ ರೌಡಿಗಳೊಂದಿಗೆ ಯುವತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.





ಈ ಸಂದರ್ಭ ಯುವತಿಯ ಸೋದರರು ಮನೆಯಲ್ಲಿ ಇರಲಿಲ್ಲ. ಹೀಗಾಗಿ ಮನೆಯಲ್ಲಿದ್ದ ತಾಯಿಯನ್ನು ಬೈದಾಡಿದ್ದಲ್ಲದೆ, ನಿನ್ನ ಮಕ್ಕಳನ್ನು ಜೀವ ಸಹಿತ ಬಿಡುವುದಿಲ್ಲ ಎನ್ನುತ್ತಾ ತಲವಾರು ಮತ್ತು ರಾಡಿನಿಂದ ಮನೆಯಲ್ಲಿದ್ದ ಟಿವಿ, ಸೋಫಾ, ಮಿಕ್ಸಿಗಳಿಗೆ ಹಾನಿ ಮಾಡಿದ್ದಾರೆ. ಬಳಿಕ ತಾಯಿ ಮನೆಯ ಹಿಂಬಾಗಿಲಿನಿಂದ ಹೊರಬಂದು ಬೊಬ್ಬೆ ಹಾಕಿದ್ದು, ಸ್ಥಳೀಯರು ಸೇರುವಷ್ಟರಲ್ಲಿ ಆಗಂತುಕರು ತಾವು ಬಂದಿದ್ದ ಬೈಕ್, ಸ್ಕೂಟರಲ್ಲಿ ಪರಾರಿಯಾಗಿದ್ದಾರೆ. ಈ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಮಹಿಳೆಯ ದೂರಿನಂತೆ ಪ್ರಕರಣ ದಾಖಲಾಗಿತ್ತು.



ಪೊಲೀಸರು ಕೋಡಿಕಲ್ ನಿವಾಸಿ, ಉರ್ವಾ ಠಾಣೆಯ ರೌಡಿಶೀಟರ್ ರಂಜಿತ್ (28), ಉರ್ವಾ ಸ್ಟೋರ್ ನಿವಾಸಿ ಅವಿನಾಶ್ (23), ಕೊಟ್ಟಾರ ಚೌಕಿಯ ಪ್ರಜ್ವಲ್(24), ಕೋಡಿಬೆಂಗ್ರೆ ನಿವಾಸಿ ದೀಕ್ಷಿತ್ (21), ಮೂಲತಃ ಬಂಟ್ವಾಳ ತಾಲೂಕಿನ ಬಾರೆಕ್ಕಾಡು ನಿವಾಸಿ ಹೇಮಂತ್ (22), ಉರ್ವಾ ಸ್ಟೋರಿನ ಧನುಷ್ (19), ಕುಂಜತ್ ಬೈಲಿನ ಯತಿರಾಜ್ (23) ಎಂಬವರನ್ನು ಬಂಧಿಸಿದ್ದಾರೆ. ಈ ಪೈಕಿ ರಂಜಿತ್ ಉರ್ವಾ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು, ಉರ್ವಾದಲ್ಲಿ ಒಂಬತ್ತು ಪ್ರಕರಣ ಮತ್ತು ಕಾವೂರಿನಲ್ಲಿ ಒಂದು ಪ್ರಕರಣ ಎದುರಿಸುತ್ತಿದ್ದಾನೆ. ಅವಿನಾಶ್ ಕೂಡ ಉರ್ವಾ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ಎರಡು ಪ್ರಕರಣ ದಾಖಲಾಗಿದೆ.
Seven accused were arrested regarding the incident where a gang reportedly came armed with lethal weapons, tried to kill a woman, and vandalized her house in Shakthinagar in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am