ಬ್ರೇಕಿಂಗ್ ನ್ಯೂಸ್
03-06-21 01:41 pm Headline Karnataka News Network ಕ್ರೈಂ
Photo credits : News18
ಕೋಟಾ, ಜೂ.3: ಪತ್ನಿಯ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ ವ್ಯಕ್ತಿಯೊಬ್ಬ ಮೃತದೇಹವನ್ನು ರಸ್ತೆಯಲ್ಲಿ ಸುಮಾರು 70-80 ಮೀಟರ್ ಎಳೆದುಕೊಂಡು ಹೋದ ಪೈಶಾಚಿಕ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಿಂದ ವರದಿಯಾಗಿದೆ. ಮಹಿಳೆಯ ಜತೆಗಿದ್ದ ಹಸುಗೂಸು ಕೂಡಾ ತಂದೆಯ ಕ್ರೌರ್ಯದಿಂದ ತೀವ್ರವಾಗಿ ಗಾಯಗೊಂಡಿದ್ದು, ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಆರೋಪಿಯನ್ನು ಸುನೀಲ್ ವಾಲ್ಮೀಕಿ (40) ಅಲಿಯಾಸ್ ಪಿಂಟೂ ಎಂದು ಗುರುತಿಸಲಾಗಿದೆ. ಆರೋಪಿ ರಾಂಪುರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ ಎಂದು ಡಿವೈಎಸ್ಪಿ ಹೇಳಿಕೆ ನೀಡಿದ್ದಾರೆ. ಆದರೆ ಶರಣಾಗಲು ಠಾಣೆಯತ್ತ ಹೋಗುತ್ತಿದ್ದ ಆರೋಪಿ ಪಲಾಯನ ಮಾಡಿದ್ದಾನೆ ಎಂದು ಠಾಣಾಧಿಕಾರಿ ಹಂಸರಾಜ್ ಮೀನಾ ಸ್ಪಷ್ಟಪಡಿಸಿದ್ದಾರೆ.
ಪತ್ನಿ ಸೀಮಾಳನ್ನು ಮಂಗಳವಾರ ಮಧ್ಯಾಹ್ನ ಆಕೆಯ ಸಹೋದರನ ಮನೆಯಿಂದ ಆರೋಪಿ ಕರೆದುಕೊಂಡುಬಂದಿದ್ದ ಎನ್ನಲಾಗಿದೆ. ದಂಪತಿಯ ಒಂಭತ್ತು ವರ್ಷದ ಮಗ ಅಜ್ಜಿ ಮನೆಯಲ್ಲಿ ಉಳಿದಿದ್ದ. ಸಂಜೆ ಪತಿ-ಪತ್ನಿ ನಡುವೆ ಜಗಳವಾಗಿದ್ದು, ಆರೋಪಿ ಕೊಡಲಿಯಿಂದ ಪತ್ನಿ ಮೇಲೆ ಹಲ್ಲೆ ಮಾಡಿದ. ಬಳಿಕ ರಸ್ತೆಯಲ್ಲಿ 70-80 ಕಿಲೋಮೀಟರ್ ದೂರವರೆಗೆ ಪತ್ನಿಯ ಮೃತದೇಹವನ್ನು ಎಳೆದಾಡಿಕೊಂಡು ಬಂದಿದ್ದನ್ನು ನೋಡಿ ಜನ ಭೀತಿಗೊಂಡರು ಎಂದು ಠಾಣಾಧಿಕಾರಿ ವಿವರಿಸಿದ್ದಾರೆ.
ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಪುಟ್ಟ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಬುಧವಾರ ಮಗು ಮೃತಪಟ್ಟಿದೆ ಎಂದು ಹೇಳಿದ್ದಾರೆ. ಕೂಲಿ ಕಾರ್ಮಿಕನಾಗಿದ್ದ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 15 ವರ್ಷ ಹಿಂದೆ ಸೀಮಾಳನ್ನು ವಿವಾಹವಾಗಿದ್ದ ಈತನಿಗೆ ಇಬ್ಬರು ಗಂಡುಮಕ್ಕಳಿದ್ದರು.
Chaos erupted in the Rampura area of Kota city in Rajasthan after a man was seen dragging the body of his deceased wife outside their house after allegedly killing her with an ax on Tuesday. He later arrived at the Rampura police station with the blood-dripping weapon and admitted his crime. He has been arrested.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm