ಬ್ರೇಕಿಂಗ್ ನ್ಯೂಸ್
04-06-21 09:44 pm Mangaluru Correspondent ಕ್ರೈಂ
ಉಳ್ಳಾಲ, ಜೂ.4: ಅಪಘಾತದ ಕಾರಣವನ್ನೇ ಮುಂದಿಟ್ಟು ಯುವಕರ ತಂಡವೊಂದು ಬೈಕ್ ಸವಾರ ಯುವಕನ ಮೇಲೆ ಮಾರಣಾಂತಿಕ ಹಲ್ಲೆಗೈದ ಘಟನೆ ಉಳ್ಳಾಲದಲ್ಲಿ ನಡೆದಿದೆ.

ಉಳ್ಳಾಲ ಧರ್ಮನಗರ ನಿವಾಸಿ ದಿವಾಕರ್ (34)ಹಲ್ಲೆಗೊಳಗಾದ ಯುವಕ. ದಿವಾಕರ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು ಗುರುವಾರ ಬೆಳಗ್ಗೆ 9 ಗಂಟೆಯ ವೇಳೆಗೆ ಉಳ್ಳಾಲದ ಅಬ್ಬಕ್ಕ ಸರ್ಕಲ್ ನ ಎಟಿಎಂ ಸೆಂಟರ್ ಬಳಿ ತನ್ನ ಬೈಕನ್ನು ಧರ್ಮನಗರದ ಕಡೆಗೆ ತಿರುಗಿಸುತ್ತಿದ್ದ ವೇಳೆ ಹಿಂದಿನಿಂದ ಸ್ಕೂಟಿ ಚಲಾಯಿಸಿಕೊಂಡು ಬಂದ ಮುಸ್ಲಿಂ ಯುವತಿಯೊಬ್ಬರು ದಿವಾಕರ್ ಅವರ ಬೈಕಿಗೆ ಡಿಕ್ಕಿಯಾಗಿದ್ದರು ಎನ್ನಲಾಗಿದೆ. ಈ ವೇಳೆ ಯುವತಿ ಮತ್ತು ದಿವಾಕರ್ ಅವರ ದ್ವಿಚಕ್ರ ವಾಹನಗಳು ಜಖಂಗೊಂಡಿದ್ದು ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ.

ದಿವಾಕರ್ ಪೊಲೀಸ್ ದೂರು ನೀಡುವುದಾಗಿ ಹೇಳಿದ್ದು ಯುವತಿ ತನ್ನ ಸಹೋದರ ಮಾತನಾಡುತ್ತಾನೆಂದು ಹೇಳಿ ನಂಬರ್ ಪಡೆದು ತೆರಳಿದ್ದರು. ನಿನ್ನೆ ರಾತ್ರಿ ದಿವಾಕರ್ ಅವರಿಗೆ ಯುವತಿಯ ಸೋದರನೆಂದು ಹೇಳಿಕೊಂಡ ವ್ಯಕ್ತಿ ಕರೆ ಮಾಡಿದ್ದು ಮಾತಾನಾಡಲು ಸಿಗುವಂತೆ ಹೇಳಿದ್ದಾನೆ. ಇಂದು ಸಂಜೆ 6 ಗಂಟೆಗೆ ಕರೆ ಮಾಡಿದ ಅದೇ ವ್ಯಕ್ತಿ ಧರ್ಮನಗರದ ರಝಾಕ್ ಎಂಬವರ ಅಂಗಡಿ ಮುಂಭಾಗ ಕರೆಸಿಕೊಂಡಿದ್ದು ಸ್ಕೂಟಿ ಜಖಂಗೊಂಡಿದ್ದರ ಖರ್ಚು 4,500 ರೂ. ನೀಡುವಂತೆ ಕೇಳಿದ್ದಾನೆ. ದಿವಾಕರ್ ತನ್ನ ಬೈಕ್ ಕೂಡ ಜಖಂಗೊಂಡಿದ್ದು ಅದರ ಖರ್ಚನ್ನು ಕೇಳಿದ್ದು ಪೊಲೀಸ್ ದೂರು ನೀಡೋಣ, ಅಲ್ಲೇ ತೀರ್ಪು ಆಗಲಿ ಎಂದು ಹೇಳಿದ್ದಾರೆ. ಅಷ್ಟಕ್ಕೇ ಕ್ರುದ್ಧನಾದ ಯುವತಿಯ ಸಹೋದರ ಮತ್ತು ಆತನ ಜೊತೆಯಲ್ಲಿದ್ದ ಇಬ್ಬರು ಯುವಕರು, ದಿವಾಕರ್ ಮೇಲೆ ಕೈಮಾಡಿದ್ದು ಕೈ ಮತ್ತು ತಲೆಗೆ ಕಲ್ಲಿನಿಂದ ಹಲ್ಲೆಗೈದಿದ್ದಾರೆ.

ಅಪಘಾತವೆಸಗಿದ ಯುವತಿಯ ಸ್ಕೂಟರಿನ ಫೋಟೊವನ್ನು ದಿವಾಕರ್ ಕ್ಲಿಕ್ಕಿಸಿದ್ದು ವಾಹನದ ವಿಮೆ ಅವಧಿ ಮುಗಿದಿರುವುದಾಗಿ ಹೇಳಲಾಗುತ್ತಿದೆ. ಗಾಯಾಳು ದಿವಾಕರ್ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Mangalore Youth assaulted by a gang after an accident at Ullal. The Youth has been admitted to private hospital in Thokottu.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm