ಬ್ರೇಕಿಂಗ್ ನ್ಯೂಸ್
04-06-21 09:44 pm Mangaluru Correspondent ಕ್ರೈಂ
ಉಳ್ಳಾಲ, ಜೂ.4: ಅಪಘಾತದ ಕಾರಣವನ್ನೇ ಮುಂದಿಟ್ಟು ಯುವಕರ ತಂಡವೊಂದು ಬೈಕ್ ಸವಾರ ಯುವಕನ ಮೇಲೆ ಮಾರಣಾಂತಿಕ ಹಲ್ಲೆಗೈದ ಘಟನೆ ಉಳ್ಳಾಲದಲ್ಲಿ ನಡೆದಿದೆ.

ಉಳ್ಳಾಲ ಧರ್ಮನಗರ ನಿವಾಸಿ ದಿವಾಕರ್ (34)ಹಲ್ಲೆಗೊಳಗಾದ ಯುವಕ. ದಿವಾಕರ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು ಗುರುವಾರ ಬೆಳಗ್ಗೆ 9 ಗಂಟೆಯ ವೇಳೆಗೆ ಉಳ್ಳಾಲದ ಅಬ್ಬಕ್ಕ ಸರ್ಕಲ್ ನ ಎಟಿಎಂ ಸೆಂಟರ್ ಬಳಿ ತನ್ನ ಬೈಕನ್ನು ಧರ್ಮನಗರದ ಕಡೆಗೆ ತಿರುಗಿಸುತ್ತಿದ್ದ ವೇಳೆ ಹಿಂದಿನಿಂದ ಸ್ಕೂಟಿ ಚಲಾಯಿಸಿಕೊಂಡು ಬಂದ ಮುಸ್ಲಿಂ ಯುವತಿಯೊಬ್ಬರು ದಿವಾಕರ್ ಅವರ ಬೈಕಿಗೆ ಡಿಕ್ಕಿಯಾಗಿದ್ದರು ಎನ್ನಲಾಗಿದೆ. ಈ ವೇಳೆ ಯುವತಿ ಮತ್ತು ದಿವಾಕರ್ ಅವರ ದ್ವಿಚಕ್ರ ವಾಹನಗಳು ಜಖಂಗೊಂಡಿದ್ದು ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ.

ದಿವಾಕರ್ ಪೊಲೀಸ್ ದೂರು ನೀಡುವುದಾಗಿ ಹೇಳಿದ್ದು ಯುವತಿ ತನ್ನ ಸಹೋದರ ಮಾತನಾಡುತ್ತಾನೆಂದು ಹೇಳಿ ನಂಬರ್ ಪಡೆದು ತೆರಳಿದ್ದರು. ನಿನ್ನೆ ರಾತ್ರಿ ದಿವಾಕರ್ ಅವರಿಗೆ ಯುವತಿಯ ಸೋದರನೆಂದು ಹೇಳಿಕೊಂಡ ವ್ಯಕ್ತಿ ಕರೆ ಮಾಡಿದ್ದು ಮಾತಾನಾಡಲು ಸಿಗುವಂತೆ ಹೇಳಿದ್ದಾನೆ. ಇಂದು ಸಂಜೆ 6 ಗಂಟೆಗೆ ಕರೆ ಮಾಡಿದ ಅದೇ ವ್ಯಕ್ತಿ ಧರ್ಮನಗರದ ರಝಾಕ್ ಎಂಬವರ ಅಂಗಡಿ ಮುಂಭಾಗ ಕರೆಸಿಕೊಂಡಿದ್ದು ಸ್ಕೂಟಿ ಜಖಂಗೊಂಡಿದ್ದರ ಖರ್ಚು 4,500 ರೂ. ನೀಡುವಂತೆ ಕೇಳಿದ್ದಾನೆ. ದಿವಾಕರ್ ತನ್ನ ಬೈಕ್ ಕೂಡ ಜಖಂಗೊಂಡಿದ್ದು ಅದರ ಖರ್ಚನ್ನು ಕೇಳಿದ್ದು ಪೊಲೀಸ್ ದೂರು ನೀಡೋಣ, ಅಲ್ಲೇ ತೀರ್ಪು ಆಗಲಿ ಎಂದು ಹೇಳಿದ್ದಾರೆ. ಅಷ್ಟಕ್ಕೇ ಕ್ರುದ್ಧನಾದ ಯುವತಿಯ ಸಹೋದರ ಮತ್ತು ಆತನ ಜೊತೆಯಲ್ಲಿದ್ದ ಇಬ್ಬರು ಯುವಕರು, ದಿವಾಕರ್ ಮೇಲೆ ಕೈಮಾಡಿದ್ದು ಕೈ ಮತ್ತು ತಲೆಗೆ ಕಲ್ಲಿನಿಂದ ಹಲ್ಲೆಗೈದಿದ್ದಾರೆ.

ಅಪಘಾತವೆಸಗಿದ ಯುವತಿಯ ಸ್ಕೂಟರಿನ ಫೋಟೊವನ್ನು ದಿವಾಕರ್ ಕ್ಲಿಕ್ಕಿಸಿದ್ದು ವಾಹನದ ವಿಮೆ ಅವಧಿ ಮುಗಿದಿರುವುದಾಗಿ ಹೇಳಲಾಗುತ್ತಿದೆ. ಗಾಯಾಳು ದಿವಾಕರ್ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Mangalore Youth assaulted by a gang after an accident at Ullal. The Youth has been admitted to private hospital in Thokottu.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am