ಬ್ರೇಕಿಂಗ್ ನ್ಯೂಸ್
06-06-21 12:32 pm Udupi Correspondent ಕ್ರೈಂ
ಕುಂದಾಪುರ, ಜೂ.6: ಕೊಳವೆ ಬಾವಿಗೆ ಅನುಮತಿ ನೀಡದ ದ್ವೇಷದಲ್ಲಿ ವ್ಯಕ್ತಿಯೊಬ್ಬನನ್ನು ಗ್ರಾಪಂ ಅಧ್ಯಕ್ಷನೇ ಕಾರು ಡಿಕ್ಕಿಯಾಗಿಸಿ ಕೊಲೆಗೈದ ಘಟನೆ ಯಡಮೊಗೆ ಗ್ರಾಪಂ ವ್ಯಾಪ್ತಿಯ ಹೊಸಬಾಳು ಎಂಬಲ್ಲಿ ನಡೆದಿದೆ.
ಹೊಸಬಾಳು ನಿವಾಸಿ ಉದಯ ಗಾಣಿಗ (40) ಕೊಲೆಯಾದ ವ್ಯಕ್ತಿ. ಮೃತರ ಪತ್ನಿ ನೀಡಿದ ದೂರಿನಂತೆ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿ ಯಡಮೊಗೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೋರ್ವೆಲ್ ಪರಾವನಿಗೆ ನೀಡುವ ವಿಚಾರದಲ್ಲಿ ಇಬ್ಬರ ಮಧ್ಯೆ ಜಗಳ ನಡೆದಿತ್ತು. ಇದೇ ದ್ವೇಷದಲ್ಲಿ ಪ್ರಾಣೇಶ್ ಯಡಿಯಾಳ ತನ್ನ ಕಾರು ಚಲಾಯಿಸುತ್ತಿದ್ದ ವೇಳೆ ಅಡ್ಡಸಿಕ್ಕಿದ ಉದಯ ಗಾಣಿಗ ಅವರ ಬೈಕಿಗೆ ಡಿಕ್ಕಿಯಾಗಿಸಿ ಕೊಲೆಗೈದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಶನಿವಾರ ರಾತ್ರಿ ಘಟನೆ ನಡೆದಿದ್ದು ಗಂಭೀರ ಗಾಯಗೊಂಡ ಉದಯ ಗಾಣಿಗ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ. ಈ ವೇಳೆ ಆರೋಪಿ ತನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದ. ಬಳಿಕ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಹಾಗೂ ಇತರ ಅಧಿಕಾರಿಗಳು ತೆರಳಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಉದಯ ಗಾಣಿಗ ಜಡ್ಕಲ್ನಲ್ಲಿ ಕೃಷಿ ಕೇಂದ್ರವನ್ನು ಹೊಂದಿದ್ದು ಬೋರ್ ವೆಲ್ ಅನುಮತಿ ನೀಡುವ ಜವಾಬ್ದಾರಿ ಹೊಂದಿದ್ದರು.
ಮೃತರು ಪತ್ನಿ, ಎರಡು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident a 40-year-old social activist was found dead in a suspicious manner after a car ran over him at Yadamoge under the Shankaranarayana Police station limits on Saturday, June 5 night.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm