ಬ್ರೇಕಿಂಗ್ ನ್ಯೂಸ್
06-06-21 12:32 pm Udupi Correspondent ಕ್ರೈಂ
ಕುಂದಾಪುರ, ಜೂ.6: ಕೊಳವೆ ಬಾವಿಗೆ ಅನುಮತಿ ನೀಡದ ದ್ವೇಷದಲ್ಲಿ ವ್ಯಕ್ತಿಯೊಬ್ಬನನ್ನು ಗ್ರಾಪಂ ಅಧ್ಯಕ್ಷನೇ ಕಾರು ಡಿಕ್ಕಿಯಾಗಿಸಿ ಕೊಲೆಗೈದ ಘಟನೆ ಯಡಮೊಗೆ ಗ್ರಾಪಂ ವ್ಯಾಪ್ತಿಯ ಹೊಸಬಾಳು ಎಂಬಲ್ಲಿ ನಡೆದಿದೆ.
ಹೊಸಬಾಳು ನಿವಾಸಿ ಉದಯ ಗಾಣಿಗ (40) ಕೊಲೆಯಾದ ವ್ಯಕ್ತಿ. ಮೃತರ ಪತ್ನಿ ನೀಡಿದ ದೂರಿನಂತೆ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿ ಯಡಮೊಗೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೋರ್ವೆಲ್ ಪರಾವನಿಗೆ ನೀಡುವ ವಿಚಾರದಲ್ಲಿ ಇಬ್ಬರ ಮಧ್ಯೆ ಜಗಳ ನಡೆದಿತ್ತು. ಇದೇ ದ್ವೇಷದಲ್ಲಿ ಪ್ರಾಣೇಶ್ ಯಡಿಯಾಳ ತನ್ನ ಕಾರು ಚಲಾಯಿಸುತ್ತಿದ್ದ ವೇಳೆ ಅಡ್ಡಸಿಕ್ಕಿದ ಉದಯ ಗಾಣಿಗ ಅವರ ಬೈಕಿಗೆ ಡಿಕ್ಕಿಯಾಗಿಸಿ ಕೊಲೆಗೈದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಶನಿವಾರ ರಾತ್ರಿ ಘಟನೆ ನಡೆದಿದ್ದು ಗಂಭೀರ ಗಾಯಗೊಂಡ ಉದಯ ಗಾಣಿಗ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ. ಈ ವೇಳೆ ಆರೋಪಿ ತನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದ. ಬಳಿಕ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಹಾಗೂ ಇತರ ಅಧಿಕಾರಿಗಳು ತೆರಳಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಉದಯ ಗಾಣಿಗ ಜಡ್ಕಲ್ನಲ್ಲಿ ಕೃಷಿ ಕೇಂದ್ರವನ್ನು ಹೊಂದಿದ್ದು ಬೋರ್ ವೆಲ್ ಅನುಮತಿ ನೀಡುವ ಜವಾಬ್ದಾರಿ ಹೊಂದಿದ್ದರು.
ಮೃತರು ಪತ್ನಿ, ಎರಡು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident a 40-year-old social activist was found dead in a suspicious manner after a car ran over him at Yadamoge under the Shankaranarayana Police station limits on Saturday, June 5 night.
14-06-25 11:05 pm
Bangalore Correspondent
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
15-06-25 03:20 pm
Mangalore Correspondent
Mangalore Rain, Compound Wall Collapsed Video...
15-06-25 12:12 pm
Rahiman Murder, Senior Advocate Balan, Mangal...
14-06-25 10:21 pm
Mangalore Heavy Rain, Traffic, Pumpwell: ಒಂದೇ...
14-06-25 09:00 pm
Bangalore RCB Stampede, Veerappa Moily: ಕಾಲ್ತ...
14-06-25 02:49 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm