ಬ್ರೇಕಿಂಗ್ ನ್ಯೂಸ್
11-06-21 02:57 pm Mangalore Correspondent ಕ್ರೈಂ
ಮಂಗಳೂರು, ಜೂನ್ 11: ಭಾರೀ ಪ್ರಮಾಣದ ನಿಷೇಧಿತ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಪೊಲೀಸರು ಕೇರಳ ಮೂಲದ ಖದೀಮನನ್ನು ಬಂಧಿಸಿದ್ದಾರೆ.
ಕೇರಳದ ಕ್ಯಾಲಿಕಟ್ ಜಿಲ್ಲೆಯ ಮೊಹಮ್ಮದ್ ಅಜಿನಾಸ್ (25) ಬಂಧಿತ ವ್ಯಕ್ತಿ. ಈತನಲ್ಲಿದ್ದ 15 ಗ್ರಾಮ್ 15 ಮಿಲೀ ಗ್ರಾಂ ತೂಕದ 840 ಎಲ್ ಎಸ್ ಡಿ ಡ್ರಗ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕದ್ರಿ ಮೈದಾನದ ಬಳಿ ಗ್ರಾಹಕರಿಗೆ ಕಾದಿರುತ್ತಿದ್ದ ಸಮಯದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಎಲ್ ಎಸ್ ಡಿ ಸ್ಟಾಂಪ್ ಅತ್ಯಂತ ಬೆಲೆಬಾಳುವಂಥದ್ದು. ಒಂದು ಸ್ಟ್ರಿಪ್ ಗೆ ಸಾಮಾನ್ಯವಾಗಿ 2ರಿಂದ ಆರು ಸಾವಿರ ರೂ. ಬೆಲೆಯಿದ್ದು ಶ್ರೀಮಂತರು ಮಾತ್ರ ಇದನ್ನು ಖರೀದಿ ಮಾಡುತ್ತಾರೆ. ಮಂಗಳೂರಿನಲ್ಲಿ ವಿದ್ಯಾರ್ಥಿಗಳು ಮತ್ತು ಹೈಎಂಡ್ ಪಾರ್ಟಿ ನಡೆಸುವ ಮಂದಿಯೇ ಇದರ ಗ್ರಾಹಕರು. 840 ಸ್ಟ್ರಿಪ್ ದರ 16.80 ಲಕ್ಷ ಆಗಿದ್ದು, ಈತನ ಹಿಂದೆ ಯಾರೆಲ್ಲ ಇದ್ದಾರೆ. ಈತನ ಹಿಂದೆ ಬೇರೆ ಯಾರು ಪೆಡ್ಲರ್ ಗಳಿದ್ದಾರೆ ಎನ್ನೋದನ್ನು ಪತ್ತೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಕದ್ರಿ ಠಾಣೆಗೆ ಹಸ್ತಾಂತರ ಮಾಡಿದ್ದಾರೆ. ಅಜಿನಾಸ್ ಜೊತೆಗಿದ್ದ ಮೋಟಾರ್ ಸೈಕಲ್ ಮತ್ತು ಎರಡು ಮೊಬೈಲ್ ಫೋನನ್ನು ವಶಕ್ಕೆ ಪಡೆದಿದ್ದಾರೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಮಂಗಳೂರಿನಲ್ಲಿ ಮೊದಲ ಬಾರಿಗೆ ಎಲ್ ಎಸ್ ಡಿ ಡ್ರಗ್ಸ್ ಪತ್ತೆಯಾಗಿದೆ. ಮಂಗಳೂರಿನಲ್ಲಿ ಡ್ರಗ್ಸ್ ಮಾರಾಟದ ಪತ್ತೆಗಾಗಿ ಡಿಸಿಪಿ ಹರಿರಾಮ್ ಶಂಕರ್ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ಇದೇ ತಂಡ ಕಾರ್ಯಾಚರಣೆ ನಡೆಸಿದೆ.
ಮಹತ್ವದ ಕಾರ್ಯಾಚರಣೆ ನಡೆಸಿದ ಹರಿರಾಮ್ ಶಂಕರ್ ನೇತೃತ್ವದ ತಂಡಕ್ಕೆ ಅಭಿನಂದಿಸಿ ಕಮಿಷನರ್ ಶಶಿಕುಮಾರ್, ತಂಡಕ್ಕೆ ಬಹುಮಾನ ರೂಪದಲ್ಲಿ ಹತ್ತು ಸಾವಿರ ರೂ. ನೀಡುವುದಾಗಿ ಹೇಳಿದ್ದಾರೆ.
Kadri police arrested one person and seized 840 LSD strips worth Rs 16,80,000. The accused arrested is identified as Mohammed Ajinas (25) from Calicut, Kerala. LSD is a psychotropic drug. One strip of the same cost from Rs 2,000 to Rs 6,000.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm