ಬ್ರೇಕಿಂಗ್ ನ್ಯೂಸ್
12-06-21 04:57 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 12: ರೌಡಿ ಕಾಡುಬೀಸನಹಳ್ಳಿ ರೋಹಿತ್ ಈತನಿಗೆ ಕಂಟ್ರಿಮೇಡ್ ಪಿಸ್ತೂಲ್ ಹಾಗೂ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪದಲ್ಲಿ ಕಲಬುರಗಿ ಮೂಲದ ನಟೋರಿಯಸ್ ರೌಡಿ ಸೇರಿ ಮೂವರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿಯ ಸತೀಶ್ ಅಲಿಯಾಸ್ ಮಾರ್ಕೆಟ್ ಸತೀಶ್ (38) ಬಂಧಿತ ಆರೋಪಿ. ಆರೋಪಿಯನ್ನು 15 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಇನ್ನು ಇಬ್ಬರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾಡುಬೀಸನಹಳ್ಳಿ ಸೋಮ ಮತ್ತು ರೋಹಿತ್ ರೌಡಿಗಳಾಗಿದ್ದು, ಪರಸ್ಪರ ಹತ್ಯೆಗೆ ಸಂಚು ರೂಪಿಸಿದ್ದರು. ಎರಡು ತಿಂಗಳ ಹಿಂದೆ ರೋಹಿತ್, ಸೋಮನ ಹತ್ಯೆಗೆ ಸಂಚು ರೂಪಿಸಿ ಮಂಗಳೂರಿನಿಂದ ಯುವಕರನ್ನು ಕರೆಸಿದ್ದ. ಈ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ರೋಹಿತ್ ಸೇರಿ ಏಳು ಮಂದಿಯನ್ನು ಬಂಧಿಸಿದ್ದಾರೆ.

ಕೆಲ ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾದ ರೋಹಿತ್ ಹತ್ಯೆಗೆ ಸಂಚು ರೂಪಿಸಿದ ಸೋಮ ಮತ್ತು ಆತನ ಸಹಚರರನ್ನು ಪೊಲೀಸರು ಬಂಧಿಸಿದ್ದರು. ರೋಹಿತ್ ಮತ್ತು ಆತನ ಸಹಚರರ ವಿಚಾರಣೆಯಲ್ಲಿ ಸತೀಶ್ ಹೆಸರು ಬಾಯಿಬಿಟ್ಟಿದ್ದರು. ಅಲ್ಲದೆ, ಇದೇ ಸತೀಶ್ ರೌಡಿ ಜೀತು, ಗಣೇಶ್ ಕೊಲೆಗೆ ಗೊಟ್ಟಿಗೆರೆ ಪರಮೇಶ್ ಗೂ ಕಂಟ್ರಿಮೇಡ್ ಪಿಸ್ತೂಲ್ ಕೊಟ್ಟಿದ್ದರು ಎಂಬುದು ಗೊತ್ತಾಗಿದೆ.
ಮತ್ತೊಂದೆಡೆ ಖಚಿತ ಮಾಹಿತಿ ಮೇರೆಗೆ ಇಸ್ರೋ ಲೇಔಟ್ ನ ಶಂಕರ್ ಎಂಬಾತನ ಮನೆ ಮೇಲೆ ದಾಳಿ ನಡೆಸಿದಾಗ ಸತೀಶ್ ಮಾರಾಟ ಮಾಡಿದ್ದ ಪಿಸ್ತೂಲ್ ಸಿಕ್ಕಿದೆ. ಈ ಮಾಹಿತಿ ಮೇರೆಗೆ ಹೈದರಾಬಾದ್ ನಲ್ಲಿ ತಲೆಮರೆಸಿಕೊಂಡಿದ್ದ ಸತೀಶ್ನನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸತೀಶ್ ಅಲಿಯಾಸ್ ಮಾರ್ಕೆಟ್ ಸತೀಶ್ ವಿರುದ್ಧ ಕಲಬುರಗಿಯಲ್ಲಿ ನಾಲ್ಕು ಕೊಲೆ ಸೇರಿ 30ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಈತ ಮತ್ತು ಈತನ ಸಹಚರರ ಉಪಟಳಕ್ಕೆ ಬ್ರೇಕ್ ಹಾಕಲು ಕಲಬುರಗಿ ಪೊಲೀಸರು ಸತೀಶ್ ಸಹಚರ ಕರಿ ಚಿರತೆ ಸೇರಿ ಇಬ್ಬರನ್ನು ಎನ್ಕೌಂಟರ್ ಮಾಡಿದ್ದರು.

ಈತ ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ್ ಹಾಗೂ ಇತರೆಡೆಯಿಂದ ಕಂಟ್ರಿಮೇಡ್ ಪಿಸ್ತೂಲ್ ಗಳನ್ನು 10-15 ಸಾವಿರ ರೂ.ಗೆ ತರಿಸಿ ಕರ್ನಾಟಕದ ರೌಡಿಗಳಿಗೆ 80 ಸಾವಿರದಿಂದ 1 ಲಕ್ಷ ರೂ.ವರೆಗೆ ಮಾರಾಟ ಮಾಡುತ್ತಿದ್ದ. ಅದರಿಂದ ಕೋಟ್ಯಂತರ ರೂ. ಹಣಗಳಿಸಿದ್ದು, ಹೈದರಾಬಾದಿನಲ್ಲಿ ಮೂರು ಕೋಟಿ ರೂ. ವೆಚ್ಚದಲ್ಲಿ ಐಷಾರಾಮಿ ಮನೆ ನಿರ್ಮಿಸಿದ್ದಾನೆ. ಕಲಬುರಗಿಯಲ್ಲಿಯೂ ಕೋಟ್ಯಂತರ ರೂ. ಮೌಲ್ಯದ ಮನೆ ನಿರ್ಮಿಸಿದ್ದು, ಹೊಸ ಕಾರುಗಳನ್ನು ಖರೀದಿಸಿದ್ದಾನೆ.
ಸದ್ಯ ಆರೋಪಿ ಸತೀಶ್ ಹಾಗೂ ಮತ್ತಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಯುತ್ತಿದೆ. ಇದುವರೆಗೂ 70ಕ್ಕೂ ಅಧಿಕ ಪಿಸ್ತೂಲುಗಳನ್ನು ಮಾರಾಟ ಮಾಡಿದ್ದಾನೆ ಎಂಬುದು ಪತ್ತೆಯಾಗಿದೆ. ರೌಡಿಗಳು ಮಾತ್ರವಲ್ಲದೆ, ಬೇರೆ ಯಾರಿಗೆಲ್ಲ ಪಿಸ್ತೂಲ್ಗಳನ್ನು ಮಾರಾಟ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಬೇಕಿದೆ ಎಂದು ಮೂಲಗಳು ತಿಳಿಸಿವೆ.
CCB Police Arrested 3 country-made Pistol Illegal Dealers in Bengaluru.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm