ಬ್ರೇಕಿಂಗ್ ನ್ಯೂಸ್
13-06-21 04:34 pm Mangaluru Correspondent ಕ್ರೈಂ
ಉಳ್ಳಾಲ, ಜೂ.13: ಬೆಂಗಳೂರಿನ ಕಮ್ಮನಹಳ್ಳಿಯಿಂದ 4 ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ MDMA ಮಾದಕ ವಸ್ತುವನ್ನು ಕೇರಳಕ್ಕೆ ಸಾಗಿಸುತ್ತಿದ್ದ ಕಾರನ್ನು ನಾಟೆಕಲ್ ಎಂಬಲ್ಲಿ ಕೊಣಾಜೆ ಪಿಎಸ್ಐ ಮಲ್ಲಿಕಾರ್ಜುನ್ ನೇತೃತ್ವದ ತಂಡ ಇಂದು ಬೆಳಗ್ಗೆ ಜಪ್ತಿ ಮಾಡಿದ್ದು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ನಾಟೆಕಲ್ ಸಮೀಪದ ವಿಜಯ ನಗರ ಎಂಬಲ್ಲಿ ನಿಷೇಧಿತ ಮಾದಕ ವಸ್ತು MDMA ಸಾಗಿಸುತ್ತಿದ್ದ ಸ್ವಿಫ್ಟ್ ಕಾರನ್ನು ಕೊಣಾಜೆ ಠಾಣೆ ಸಬ್ ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಬಿರಾದಾರ್ ನೇತೃತ್ವದ ತಂಡ ತಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಕಾಸರಗೋಡು ನಿವಾಸಿಗಳಾದ ಶಫೀಕ್ ಮತ್ತು ಅಲ್ತಾಫ್ ಬಂಧಿತ ಆರೋಪಿಗಳು.


ಶಫೀಕ್ ಮತ್ತು ಅಲ್ತಾಫ್ ಬೆಂಗಳೂರಿನ ಕಮ್ಮನ ಹಳ್ಳಿಯಿಂದ 3,90,000 ರೂಪಾಯಿ ಮೌಲ್ಯದ ನಿಷೇಧಿತ ಮಾದಕ ಪದಾರ್ಥ MDMA ಯನ್ನು ಸ್ವಿಪ್ಟ್ ಕಾರಲ್ಲಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಕ ತರುತ್ತಿದ್ದರು. ಹೆದ್ದಾರಿಯಿಂದ ಮೆಲ್ಕಾರ್, ಮುಡಿಪು, ನಾಟೆಕಲ್ ಮಾರ್ಗವಾಗಿ ಕೇರಳಕ್ಕೆ ಸಾಗಿಸುತ್ತಿದ್ದರೆನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಕೊಣಾಜೆ ಠಾಣಾ ಸಬ್ಬಿನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಬಿರಾದರ್ ಅವರು ನಾಟೆಕಲ್ ನ ವಿಜಯನಗರ ಎಂಬಲ್ಲಿ ಸ್ವಿಫ್ಟ್ ಕಾರನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಿನಲ್ಲಿದ್ದ ಆರೋಪಿಗಳನ್ನ ವಿಚಾರಿಸಿದಾಗ ನಿಷೇಧಿತ ಮಾದಕ ವಸ್ತುಗಳನ್ನ ಕೇರಳಕ್ಕೆ ಸಾಗಿಸುತ್ತಿರುವ ಬಗ್ಗೆ ಹೇಳಿದ್ದು, ಬಂಧಿತ ಆರೋಪಿಗಳಿಂದ 4 ಮೊಬೈಲ್ ಫೋನ್, ಒಂದು ಸ್ವಿಪ್ಟ್ ಕಾರು ಸೇರಿ ಒಟ್ಟು 9,01,000 ಮೌಲ್ಯದ ಸೊತ್ತನ್ನ ವಶಪಡಿಸಿಕೊಳ್ಳಲಾಗಿದೆ.
ಡಿಸಿಪಿ ಹರಿರಾಂ ಶಂಕರ್ ನಿರ್ದೇಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತರಾದ ರಂಜಿತ್ ಕುಮಾರ್ ಬಂಡಾರು ನೇತೃತ್ವದಲ್ಲಿ ಕೊಣಾಜೆ ಠಾಣೆ ನಿರೀಕ್ಷಕರಾದ ಪ್ರಕಾಶ್ ದೇವಾಡಿಗ, ಪಿಎಸ್ಐ ಶರಣಪ್ಪ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.
Konaje police on Sunday June 13 intercepted a car at Natekal, Manjanady and arrested two persons who were transporting banned MDMA drugs. The car with with registration number KL 14 R 3536 was heading from Uppinangady to Kerala through Malkar, Mudipu and Natekal route.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am