ಬ್ರೇಕಿಂಗ್ ನ್ಯೂಸ್
13-06-21 04:34 pm Mangaluru Correspondent ಕ್ರೈಂ
ಉಳ್ಳಾಲ, ಜೂ.13: ಬೆಂಗಳೂರಿನ ಕಮ್ಮನಹಳ್ಳಿಯಿಂದ 4 ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ MDMA ಮಾದಕ ವಸ್ತುವನ್ನು ಕೇರಳಕ್ಕೆ ಸಾಗಿಸುತ್ತಿದ್ದ ಕಾರನ್ನು ನಾಟೆಕಲ್ ಎಂಬಲ್ಲಿ ಕೊಣಾಜೆ ಪಿಎಸ್ಐ ಮಲ್ಲಿಕಾರ್ಜುನ್ ನೇತೃತ್ವದ ತಂಡ ಇಂದು ಬೆಳಗ್ಗೆ ಜಪ್ತಿ ಮಾಡಿದ್ದು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ನಾಟೆಕಲ್ ಸಮೀಪದ ವಿಜಯ ನಗರ ಎಂಬಲ್ಲಿ ನಿಷೇಧಿತ ಮಾದಕ ವಸ್ತು MDMA ಸಾಗಿಸುತ್ತಿದ್ದ ಸ್ವಿಫ್ಟ್ ಕಾರನ್ನು ಕೊಣಾಜೆ ಠಾಣೆ ಸಬ್ ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಬಿರಾದಾರ್ ನೇತೃತ್ವದ ತಂಡ ತಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಕಾಸರಗೋಡು ನಿವಾಸಿಗಳಾದ ಶಫೀಕ್ ಮತ್ತು ಅಲ್ತಾಫ್ ಬಂಧಿತ ಆರೋಪಿಗಳು.


ಶಫೀಕ್ ಮತ್ತು ಅಲ್ತಾಫ್ ಬೆಂಗಳೂರಿನ ಕಮ್ಮನ ಹಳ್ಳಿಯಿಂದ 3,90,000 ರೂಪಾಯಿ ಮೌಲ್ಯದ ನಿಷೇಧಿತ ಮಾದಕ ಪದಾರ್ಥ MDMA ಯನ್ನು ಸ್ವಿಪ್ಟ್ ಕಾರಲ್ಲಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಕ ತರುತ್ತಿದ್ದರು. ಹೆದ್ದಾರಿಯಿಂದ ಮೆಲ್ಕಾರ್, ಮುಡಿಪು, ನಾಟೆಕಲ್ ಮಾರ್ಗವಾಗಿ ಕೇರಳಕ್ಕೆ ಸಾಗಿಸುತ್ತಿದ್ದರೆನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಕೊಣಾಜೆ ಠಾಣಾ ಸಬ್ಬಿನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಬಿರಾದರ್ ಅವರು ನಾಟೆಕಲ್ ನ ವಿಜಯನಗರ ಎಂಬಲ್ಲಿ ಸ್ವಿಫ್ಟ್ ಕಾರನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಿನಲ್ಲಿದ್ದ ಆರೋಪಿಗಳನ್ನ ವಿಚಾರಿಸಿದಾಗ ನಿಷೇಧಿತ ಮಾದಕ ವಸ್ತುಗಳನ್ನ ಕೇರಳಕ್ಕೆ ಸಾಗಿಸುತ್ತಿರುವ ಬಗ್ಗೆ ಹೇಳಿದ್ದು, ಬಂಧಿತ ಆರೋಪಿಗಳಿಂದ 4 ಮೊಬೈಲ್ ಫೋನ್, ಒಂದು ಸ್ವಿಪ್ಟ್ ಕಾರು ಸೇರಿ ಒಟ್ಟು 9,01,000 ಮೌಲ್ಯದ ಸೊತ್ತನ್ನ ವಶಪಡಿಸಿಕೊಳ್ಳಲಾಗಿದೆ.
ಡಿಸಿಪಿ ಹರಿರಾಂ ಶಂಕರ್ ನಿರ್ದೇಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತರಾದ ರಂಜಿತ್ ಕುಮಾರ್ ಬಂಡಾರು ನೇತೃತ್ವದಲ್ಲಿ ಕೊಣಾಜೆ ಠಾಣೆ ನಿರೀಕ್ಷಕರಾದ ಪ್ರಕಾಶ್ ದೇವಾಡಿಗ, ಪಿಎಸ್ಐ ಶರಣಪ್ಪ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.
Konaje police on Sunday June 13 intercepted a car at Natekal, Manjanady and arrested two persons who were transporting banned MDMA drugs. The car with with registration number KL 14 R 3536 was heading from Uppinangady to Kerala through Malkar, Mudipu and Natekal route.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
02-01-26 12:32 pm
HK News Desk
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm