ಬ್ರೇಕಿಂಗ್ ನ್ಯೂಸ್
13-06-21 04:34 pm Mangaluru Correspondent ಕ್ರೈಂ
ಉಳ್ಳಾಲ, ಜೂ.13: ಬೆಂಗಳೂರಿನ ಕಮ್ಮನಹಳ್ಳಿಯಿಂದ 4 ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ MDMA ಮಾದಕ ವಸ್ತುವನ್ನು ಕೇರಳಕ್ಕೆ ಸಾಗಿಸುತ್ತಿದ್ದ ಕಾರನ್ನು ನಾಟೆಕಲ್ ಎಂಬಲ್ಲಿ ಕೊಣಾಜೆ ಪಿಎಸ್ಐ ಮಲ್ಲಿಕಾರ್ಜುನ್ ನೇತೃತ್ವದ ತಂಡ ಇಂದು ಬೆಳಗ್ಗೆ ಜಪ್ತಿ ಮಾಡಿದ್ದು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ನಾಟೆಕಲ್ ಸಮೀಪದ ವಿಜಯ ನಗರ ಎಂಬಲ್ಲಿ ನಿಷೇಧಿತ ಮಾದಕ ವಸ್ತು MDMA ಸಾಗಿಸುತ್ತಿದ್ದ ಸ್ವಿಫ್ಟ್ ಕಾರನ್ನು ಕೊಣಾಜೆ ಠಾಣೆ ಸಬ್ ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಬಿರಾದಾರ್ ನೇತೃತ್ವದ ತಂಡ ತಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಕಾಸರಗೋಡು ನಿವಾಸಿಗಳಾದ ಶಫೀಕ್ ಮತ್ತು ಅಲ್ತಾಫ್ ಬಂಧಿತ ಆರೋಪಿಗಳು.


ಶಫೀಕ್ ಮತ್ತು ಅಲ್ತಾಫ್ ಬೆಂಗಳೂರಿನ ಕಮ್ಮನ ಹಳ್ಳಿಯಿಂದ 3,90,000 ರೂಪಾಯಿ ಮೌಲ್ಯದ ನಿಷೇಧಿತ ಮಾದಕ ಪದಾರ್ಥ MDMA ಯನ್ನು ಸ್ವಿಪ್ಟ್ ಕಾರಲ್ಲಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಕ ತರುತ್ತಿದ್ದರು. ಹೆದ್ದಾರಿಯಿಂದ ಮೆಲ್ಕಾರ್, ಮುಡಿಪು, ನಾಟೆಕಲ್ ಮಾರ್ಗವಾಗಿ ಕೇರಳಕ್ಕೆ ಸಾಗಿಸುತ್ತಿದ್ದರೆನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಕೊಣಾಜೆ ಠಾಣಾ ಸಬ್ಬಿನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಬಿರಾದರ್ ಅವರು ನಾಟೆಕಲ್ ನ ವಿಜಯನಗರ ಎಂಬಲ್ಲಿ ಸ್ವಿಫ್ಟ್ ಕಾರನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಿನಲ್ಲಿದ್ದ ಆರೋಪಿಗಳನ್ನ ವಿಚಾರಿಸಿದಾಗ ನಿಷೇಧಿತ ಮಾದಕ ವಸ್ತುಗಳನ್ನ ಕೇರಳಕ್ಕೆ ಸಾಗಿಸುತ್ತಿರುವ ಬಗ್ಗೆ ಹೇಳಿದ್ದು, ಬಂಧಿತ ಆರೋಪಿಗಳಿಂದ 4 ಮೊಬೈಲ್ ಫೋನ್, ಒಂದು ಸ್ವಿಪ್ಟ್ ಕಾರು ಸೇರಿ ಒಟ್ಟು 9,01,000 ಮೌಲ್ಯದ ಸೊತ್ತನ್ನ ವಶಪಡಿಸಿಕೊಳ್ಳಲಾಗಿದೆ.
ಡಿಸಿಪಿ ಹರಿರಾಂ ಶಂಕರ್ ನಿರ್ದೇಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತರಾದ ರಂಜಿತ್ ಕುಮಾರ್ ಬಂಡಾರು ನೇತೃತ್ವದಲ್ಲಿ ಕೊಣಾಜೆ ಠಾಣೆ ನಿರೀಕ್ಷಕರಾದ ಪ್ರಕಾಶ್ ದೇವಾಡಿಗ, ಪಿಎಸ್ಐ ಶರಣಪ್ಪ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.
Konaje police on Sunday June 13 intercepted a car at Natekal, Manjanady and arrested two persons who were transporting banned MDMA drugs. The car with with registration number KL 14 R 3536 was heading from Uppinangady to Kerala through Malkar, Mudipu and Natekal route.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm