ಬ್ರೇಕಿಂಗ್ ನ್ಯೂಸ್
18-06-21 08:07 pm Mangaluru Correspondent ಕ್ರೈಂ
ಮಂಗಳೂರು, ಜೂನ್ 18: ತುಳುನಾಡಿನ ಬಾವುಟವನ್ನು ಚಪ್ಪಲಿಯ ಬಣ್ಣಕ್ಕೆ ಹೊಂದಿಕೆಯಾಗುವಂತೆ ಎಡಿಟ್ ಮಾಡಿ, ಫೇಸ್ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣದಲ್ಲಿ ಬರ್ಕೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿರುವ ಸೂರ್ಯ ಎನ್.ಕೆ. (19) ಬಂಧಿತ ಆರೋಪಿ. ತುಳುನಾಡಿನ ಬಾವುಟವನ್ನು ಎಡಿಟ್ ಮಾಡಿ, ತನ್ನ ಫೇಸ್ಬುಕ್ ನಲ್ಲಿ ಹಾಕಿದ್ದಲ್ಲದೆ ಅಶ್ಲೀಲವಾಗಿ ಕಮೆಂಟ್ ಹಾಕಿದ್ದ. ಈ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಶಶಿಧರ ಹೆಗ್ಡೆ ಪೊಲೀಸರಿಗೆ ದೂರು ನೀಡಿದ್ದರು.
ಬರ್ಕೆ ಠಾಣೆಯಲ್ಲಿ ಈ ಬಗ್ಗೆ ಪೊಲೀಸರು 153(ಎ) ಮತ್ತು 505 (2) ಐಪಿಸಿ ಅಡಿ ಪ್ರಕರಣ ದಾಖಲಿಸಿದ್ದರು. ಆರೋಪಿಯ ಪತ್ತೆಗಾಗಿ ಬರ್ಕೆ ಠಾಣೆ ಎಸ್ಐ ಹಾರುಣ್ ಅಖ್ತರ್ ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣೆ ಸಿಬಂದಿ ಪುಷ್ಪರಾಜ್, ಪ್ರಕಾಶ್, ಬರ್ಕೆ ಠಾಣೆಯ ಶರತ್ ಎಂಬವರನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.

ಪೊಲೀಸ್ ತಂಡ ಬೆಂಗಳೂರಿಗೆ ತೆರಳಿ, ಆರೋಪಿಯ ಮನೆಯನ್ನು ಪತ್ತೆ ಮಾಡಿದೆ. ಆರೋಪಿ ಸೂರ್ಯ ಎನ್.ಕೆ. ಶ್ರೀರಾಂಪುರದಲ್ಲಿ ಒಂದನೇ ಕ್ರಾಸ್ ನಿವಾಸಿಯಾಗಿದ್ದನ್ನು ಪತ್ತೆ ಮಾಡಿ, ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಯನ್ನು ಇಂದು ಮಂಗಳೂರಿಗೆ ಕರೆತಂದು ಕೋರ್ಟಿಗೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ತುಳುವರು ಕಳೆದ ಭಾನುವಾರ ಟ್ವಿಟರ್ ನಲ್ಲಿ ಅಭಿಯಾನ ನಡೆಸಿದ್ದು, ತುಳು ಭಾಷೆಗೆ ರಾಜ್ಯಭಾಷೆಯ ಮಾನ್ಯತೆ ನೀಡುವಂತೆ ಒತ್ತಾಯ ಮಾಡಿದ್ದರು. ಈ ವೇಳೆ, ಸಾಮಾಜಿಕ ಜಾಲತಾಣದಲ್ಲಿ ತುಳು ಟ್ವೀಟ್ ಭಾರೀ ಟ್ರೆಂಡ್ ಆಗಿತ್ತು. ಇದೇ ವೇಳೆ, ಸೂರ್ಯ ತುಳುವರನ್ನು ಕೆರಳಿಸುವುದಕ್ಕಾಗಿ ತುಳು ಬಾವುಟವನ್ನು ಚಪ್ಪಲಿಗೆ ಹೊಂದಿಸಿ, ಪೋಸ್ಟ್ ಮಾಡಿದ್ದಲ್ಲದೆ, ಇವತ್ತು ತುಳುನಾಡ್ ಚಪ್ಪಲಿ ಬಂದಿದೆ, ನಾಳೆ ಬಿಕಿನಿಯೂ ಬರಬಹುದು, ಹಾಕಿಕೊಂಡು ಮಜಾ ಮಾಡಿ ಎಂದು ಬರೆದು ತುಳು ಭಾಷಿಕರ ಭಾವನೆಗೆ ಘಾಸಿಗೊಳಿಸುವ ಕೆಲಸ ಮಾಡಿದ್ದ. ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.
The Mangalore City Polie have arrested a man accused of insulting the Tulu Nadu flag through a Facebook post recently. His post had gone viral on social media. The arrested has been identified as Surya NK.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am